ಹುಲಿಯ ಕಾಲುಗಳು ಹಾಗೂ ಕುತ್ತಿಗೆಗೆ ತಂತಿಯಿಂದ ಕಟ್ಟಿ, ಅದಕ್ಕೆ ಭಾರವಾದ ಕಲ್ಲು ಕಟ್ಟಿ ಕೆರೆಗೆ ಹಾಕಲಾಗಿತ್ತು. ಹಾಗಾಗಿ ಹುಲಿಯ ಸಾವಿನ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದವು. ಹುಲಿಯ ಕಳೇಬರವನ್ನು ಬೇರೆ ಕಡೆಯಿಂದ ತಂದು ಕೆರೆಗೆ ಹಾಕಲಾಗಿದೆ ಎಂದು ಹೇಳಿದ್ದ ಅಧಿಕಾರಿಗಳು, ವಿದ್ಯುತ್ ಆಘಾತದಿಂದ ಮೃತಪಟ್ಟಿಲ್ಲ ಎಂದೂ ಹೇಳಿದ್ದರು.