<p><strong>ಚಾಮರಾಜನಗರ:</strong> ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆದಿ ಕರ್ನಾಟಕ ವಿದ್ಯಾರ್ಥಿನಿ ನಿಲಯದ (ಕೆ.ಸಿ.ರಂಗಯ್ಯ ಹಾಸ್ಟೆಲ್) ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸರು ಮೂರನೇ ಆರೋಪಿ ಸಿ.ಎಸ್.ಗೋವಿಂದರಾಜು ಅವರನ್ನು ಬಂಧಿಸಿದ್ದಾರೆ. </p>.<p>ಹಾಸ್ಟೆಲ್ಗೆ ಸೇರಿದ ಸರ್ವೆ ನಂಬರ್ 295/4ಡಿಯಲ್ಲಿರುವ ಎಂಟು ಗುಂಟೆ ಜಮೀನನ್ನು 2ನೇ ಆರೋಪಿ ಕೆ.ಬಿ.ಹರೀಶ್ ಎಂಬುವವರಿಂದ ನಗರದ ಶಂಕರಪುರ ಬಡಾವಣೆಯ ಗೋವಿಂದರಾಜು ಅವರು ₹13.16 ಲಕ್ಷಕ್ಕೆ ಕ್ರಯಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. </p>.<p>ಹಾಸ್ಟೆಲ್ ಜಾಗವನ್ನು ಅಕ್ರಮ ಪರಭಾರೆ ಮಾಡಿರುವ ಸಂಬಂಧ ಪಟ್ಟಣ ಠಾಣೆಯಲ್ಲಿ ಮಾರ್ಚ್ 22ರಂದು 14 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಎಲ್ಲರೂ ತಲೆಮರೆಸಿಕೊಂಡಿದ್ದರು. </p>.<p>‘ಗೋವಿಂದರಾಜು ಅವರು ಈಗ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದವರು ತಲೆಮರೆಸಿಕೊಂಡಿದ್ದು, ಉಳಿದವರ ಪತ್ತೆಗೆ ಕ್ರಮವಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆದಿ ಕರ್ನಾಟಕ ವಿದ್ಯಾರ್ಥಿನಿ ನಿಲಯದ (ಕೆ.ಸಿ.ರಂಗಯ್ಯ ಹಾಸ್ಟೆಲ್) ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸರು ಮೂರನೇ ಆರೋಪಿ ಸಿ.ಎಸ್.ಗೋವಿಂದರಾಜು ಅವರನ್ನು ಬಂಧಿಸಿದ್ದಾರೆ. </p>.<p>ಹಾಸ್ಟೆಲ್ಗೆ ಸೇರಿದ ಸರ್ವೆ ನಂಬರ್ 295/4ಡಿಯಲ್ಲಿರುವ ಎಂಟು ಗುಂಟೆ ಜಮೀನನ್ನು 2ನೇ ಆರೋಪಿ ಕೆ.ಬಿ.ಹರೀಶ್ ಎಂಬುವವರಿಂದ ನಗರದ ಶಂಕರಪುರ ಬಡಾವಣೆಯ ಗೋವಿಂದರಾಜು ಅವರು ₹13.16 ಲಕ್ಷಕ್ಕೆ ಕ್ರಯಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. </p>.<p>ಹಾಸ್ಟೆಲ್ ಜಾಗವನ್ನು ಅಕ್ರಮ ಪರಭಾರೆ ಮಾಡಿರುವ ಸಂಬಂಧ ಪಟ್ಟಣ ಠಾಣೆಯಲ್ಲಿ ಮಾರ್ಚ್ 22ರಂದು 14 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಎಲ್ಲರೂ ತಲೆಮರೆಸಿಕೊಂಡಿದ್ದರು. </p>.<p>‘ಗೋವಿಂದರಾಜು ಅವರು ಈಗ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದವರು ತಲೆಮರೆಸಿಕೊಂಡಿದ್ದು, ಉಳಿದವರ ಪತ್ತೆಗೆ ಕ್ರಮವಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>