<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಮತ್ತೊಂದು ಸಾವು ಸಂಭವಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರು ಗುರುವಾರ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಗುರುವಾರವೇ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಮೂರನೇ ಅಲೆಯಲ್ಲಿ ಸಂಭವಿಸಿದ ಆರನೇ ಸಾವಿನ ಪ್ರಕರಣ ಇದು.</p>.<p>ಶನಿವಾರ ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ.</p>.<p>1,842 ಮಂದಿಯ ಪರೀಕ್ಷಾ ವರದಿ ಬಂದಿದ್ದು, 692 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 462 ಮಂದಿ ಗುಣಮುಖರಾಗಿದ್ದಾರೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 4,787ಕ್ಕೆ ಏರಿದೆ. ಸೋಂಕಿತರ ಪೈಕಿ 3,644 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ.</p>.<p>ಶುಕ್ರವಾರ ದೃಢಪಟ್ಟ 692 ಸೋಂಕಿತರಲ್ಲಿ 143 ಮಕ್ಕಳಿದ್ದಾರೆ. ಚಾಮರಾಜನಗರ ತಾಲ್ಲೂಕಿನಲ್ಲಿ 282, ಹನೂರಿನಲ್ಲಿ 192, ಗುಂಡ್ಲುಪೇಟೆಯಲ್ಲಿ 88, ಕೊಳ್ಳೇಗಾಲದಲ್ಲಿ 83 ಮತ್ತು ಯಳಂದೂರು ತಾಲ್ಲೂಕಿನಲ್ಲಿ 46 ಪ್ರಕರಣಗಳು ವರದಿಯಾಗಿವೆ.</p>.<p>ಗುಣಮುಖರಾದ 462 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 180, ಗುಂಡ್ಲುಪೇಟೆಯ 78, ಕೊಳ್ಳೇಗಾಲದ 75, ಹನೂರಿನ 68, ಯಳಂದೂರಿನ 49 ಹಾಗೂ ಹೊರ ಜಿಲ್ಲೆಗಳ 12 ಮಂದಿ ಇದ್ದಾರೆ.</p>.<p>ಶುಕ್ರವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 39,589ಕ್ಕೆ ಏರಿಕೆಯಾಗಿದೆ. ಸೋಂಕು ಮುಕ್ತರಾದವರ ಸಂಖ್ಯೆ 34,255ಕ್ಕೆ ಹಿಗ್ಗಿದೆ. ಕೋವಿಡ್ ಹಾಗೂ ಕೋವಿಡ್ಯೇತರ ಕಾರಣಗಳಿಂದ 588 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಮತ್ತೊಂದು ಸಾವು ಸಂಭವಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರು ಗುರುವಾರ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಗುರುವಾರವೇ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಮೂರನೇ ಅಲೆಯಲ್ಲಿ ಸಂಭವಿಸಿದ ಆರನೇ ಸಾವಿನ ಪ್ರಕರಣ ಇದು.</p>.<p>ಶನಿವಾರ ಜಿಲ್ಲೆಯಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ.</p>.<p>1,842 ಮಂದಿಯ ಪರೀಕ್ಷಾ ವರದಿ ಬಂದಿದ್ದು, 692 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 462 ಮಂದಿ ಗುಣಮುಖರಾಗಿದ್ದಾರೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 4,787ಕ್ಕೆ ಏರಿದೆ. ಸೋಂಕಿತರ ಪೈಕಿ 3,644 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ.</p>.<p>ಶುಕ್ರವಾರ ದೃಢಪಟ್ಟ 692 ಸೋಂಕಿತರಲ್ಲಿ 143 ಮಕ್ಕಳಿದ್ದಾರೆ. ಚಾಮರಾಜನಗರ ತಾಲ್ಲೂಕಿನಲ್ಲಿ 282, ಹನೂರಿನಲ್ಲಿ 192, ಗುಂಡ್ಲುಪೇಟೆಯಲ್ಲಿ 88, ಕೊಳ್ಳೇಗಾಲದಲ್ಲಿ 83 ಮತ್ತು ಯಳಂದೂರು ತಾಲ್ಲೂಕಿನಲ್ಲಿ 46 ಪ್ರಕರಣಗಳು ವರದಿಯಾಗಿವೆ.</p>.<p>ಗುಣಮುಖರಾದ 462 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 180, ಗುಂಡ್ಲುಪೇಟೆಯ 78, ಕೊಳ್ಳೇಗಾಲದ 75, ಹನೂರಿನ 68, ಯಳಂದೂರಿನ 49 ಹಾಗೂ ಹೊರ ಜಿಲ್ಲೆಗಳ 12 ಮಂದಿ ಇದ್ದಾರೆ.</p>.<p>ಶುಕ್ರವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 39,589ಕ್ಕೆ ಏರಿಕೆಯಾಗಿದೆ. ಸೋಂಕು ಮುಕ್ತರಾದವರ ಸಂಖ್ಯೆ 34,255ಕ್ಕೆ ಹಿಗ್ಗಿದೆ. ಕೋವಿಡ್ ಹಾಗೂ ಕೋವಿಡ್ಯೇತರ ಕಾರಣಗಳಿಂದ 588 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>