ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 47 ಹೊಸ ಪ್ರಕರಣ, ಒಬ್ಬರು ಸಾವು

Last Updated 18 ಅಕ್ಟೋಬರ್ 2020, 14:04 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಕೋವಿಡ್‌ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. 85 ಮಂದಿ ಗುಣಮುಖರಾಗಿದ್ದಾರೆ. 47 ಹೊಸ ಪ್ರಕರಣ ದೃಢಪಟ್ಟಿದೆ.

ಯಳಂದೂರು ತಾಲ್ಲೂಕಿನ ಗಣಿಗನೂರು ಗ್ರಾಮದ 48 ವರ್ಷದ ವ್ಯಕ್ತಿ ಅ.6ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದಾರೆ.

ನಾಲ್ಕು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 85ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 30 ಮಂದಿ ಕೊನೆಯುಸಿರೆಳೆದಿದ್ದಾರೆ.

ಶನಿವಾರ 47 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ 5,437 ಪ್ರಕರಣಗಳು ದೃಢಪಟ್ಟಿವೆ. 4,565 ಮಂದಿ ಗುಣಮುಖರಾಗಿದ್ದಾರೆ. ಸದ್ಯ 757 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 231 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 46 ಮಂದಿ ಐಸಿಯುನಲ್ಲಿದ್ದಾರೆ.

ಭಾನುವಾರ ಒಂದೇ ದಿನ 1,132 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 871, ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ 261 ಪರೀಕ್ಷೆಗಳನ್ನು ನಡೆಸಲಾಗಿದೆ. 1086 ಮಂದಿಯ ವರದಿ ನೆಗೆಟಿವ್‌ ಬಂದಿದೆ. 46 ಮಂದಿಗೆ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಚಾಮರಾಜನಗರ ತಾಲ್ಲೂಕಿನಲ್ಲಿ 17, ಗುಂಡ್ಲುಪೇಟೆ 11, ಹನೂರಿನಲ್ಲಿ ಒಂಬತ್ತು, ಕೊಳ್ಳೇಗಾಲದಲ್ಲಿ ಏಳು, ಯಳಂದೂರಿನಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ. ಹೊರ ಜಿಲ್ಲೆಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT