<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಭಾನುವಾರ ಕೋವಿಡ್ನಿಂದಾಗಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಖಚಿತವಾದ ಒಂದು ಪ್ರಕರಣ ಸೇರಿದಂತೆ 51 ಪ್ರಕರಣಗಳು ದೃಢಪಟ್ಟಿವೆ. 12 ಮಂದಿ ಗುಣಮುಖರಾಗಿದ್ದಾರೆ.</p>.<p>ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರ ಗ್ರಾಮದ 75 ವರ್ಷ ವೃದ್ಧರೊಬ್ಬರು ಇದೇ 8ರಂದು ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 114ಕ್ಕೆ ಏರಿದೆ. ಬೇರೆ ಕಾರಣಗಳಿಂದ 20 ಮಂದಿ ನಿಧನರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಸದ್ಯ 255 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 177 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಐಸಿಯುನಲ್ಲಿ ಎಂಟು ಮಂದಿ ಇದ್ದಾರೆ.</p>.<p>ಭಾನುವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 7,366ಕ್ಕೆ ಏರಿದೆ. 6,977 ಮಂದಿ ಗುಣಮುಖರಾಗಿದ್ದಾರೆ.</p>.<p>ಭಾನುವಾರ 1,256 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,200 ವರದಿಗಳು ನೆಗೆಟಿವ್ ಬಂದಿವೆ. 56 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಆರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಇರುವುದರಿಂದ, ಈ ಪ್ರಕರಣಗಳನ್ನು ಮೈಸೂರು ಜಿಲ್ಲೆಗೆ ವರ್ಗಾಯಿಸಲಾಗಿದೆ. ಜಿಲ್ಲೆಯ ಒಬ್ಬರಿಗೆ ಮೈಸೂರಿನಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಆ ಪ್ರಕರಣವನ್ನು ಜಿಲ್ಲೆಯ ಪಟ್ಟಿಗೆ ಸೇರಿಸಲಾಗಿದೆ.</p>.<p>51 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 19, ಕೊಳ್ಳೇಗಾಲದ ಒಂಬತ್ತು, ಗುಂಡ್ಲುಪೇಟೆ ಮತ್ತು ಹನೂರಿನ ತಲಾ ಎಂಟು, ಯಳಂದೂರು ತಾಲ್ಲೂಕಿನ ಆರು ಮಂದಿ, ಹೊರ ಜಿಲ್ಲೆಯ ಒಬ್ಬರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಭಾನುವಾರ ಕೋವಿಡ್ನಿಂದಾಗಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಖಚಿತವಾದ ಒಂದು ಪ್ರಕರಣ ಸೇರಿದಂತೆ 51 ಪ್ರಕರಣಗಳು ದೃಢಪಟ್ಟಿವೆ. 12 ಮಂದಿ ಗುಣಮುಖರಾಗಿದ್ದಾರೆ.</p>.<p>ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರ ಗ್ರಾಮದ 75 ವರ್ಷ ವೃದ್ಧರೊಬ್ಬರು ಇದೇ 8ರಂದು ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 114ಕ್ಕೆ ಏರಿದೆ. ಬೇರೆ ಕಾರಣಗಳಿಂದ 20 ಮಂದಿ ನಿಧನರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಸದ್ಯ 255 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 177 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಐಸಿಯುನಲ್ಲಿ ಎಂಟು ಮಂದಿ ಇದ್ದಾರೆ.</p>.<p>ಭಾನುವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 7,366ಕ್ಕೆ ಏರಿದೆ. 6,977 ಮಂದಿ ಗುಣಮುಖರಾಗಿದ್ದಾರೆ.</p>.<p>ಭಾನುವಾರ 1,256 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,200 ವರದಿಗಳು ನೆಗೆಟಿವ್ ಬಂದಿವೆ. 56 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಆರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಇರುವುದರಿಂದ, ಈ ಪ್ರಕರಣಗಳನ್ನು ಮೈಸೂರು ಜಿಲ್ಲೆಗೆ ವರ್ಗಾಯಿಸಲಾಗಿದೆ. ಜಿಲ್ಲೆಯ ಒಬ್ಬರಿಗೆ ಮೈಸೂರಿನಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಆ ಪ್ರಕರಣವನ್ನು ಜಿಲ್ಲೆಯ ಪಟ್ಟಿಗೆ ಸೇರಿಸಲಾಗಿದೆ.</p>.<p>51 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 19, ಕೊಳ್ಳೇಗಾಲದ ಒಂಬತ್ತು, ಗುಂಡ್ಲುಪೇಟೆ ಮತ್ತು ಹನೂರಿನ ತಲಾ ಎಂಟು, ಯಳಂದೂರು ತಾಲ್ಲೂಕಿನ ಆರು ಮಂದಿ, ಹೊರ ಜಿಲ್ಲೆಯ ಒಬ್ಬರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>