<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಬುಧವಾರ ದಾಖಲೆ 175 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ.</p>.<p>ಕಳೆದ ವರ್ಷದ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಲು ಆರಂಭಿಸಿದ ನಂತರ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ದೃಢಪಡುತ್ತಿರುವುದು ಇದೇ ಮೊದಲು.</p>.<p>ಬುಧವಾರ 73 ಜನರು ಕೋವಿಡ್ ಮುಕ್ತರಾಗಿದ್ದಾರೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 726ಕ್ಕೆ ಏರಿದೆ. ಈ ಪೈಕಿ 466 ಮಂದಿ ಹೋಂ ಐಸೋಲೇಶನ್ನಲ್ಲಿದ್ದಾರೆ. ಬುಧವಾರ ಸಾವಿನ ಪ್ರಕರಣಗಳು ವರದಿಯಾಗಿಲ್ಲ.</p>.<p>ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 8,241ಕ್ಕೆ ಏರಿದೆ. 7,376 ಮಂದಿ ಸೋಂಕು ಮುಕ್ತರಾಗಿದ್ದಾರೆ. 119 ಮಂದಿ ಕೋವಿಡ್ನಿಂದ ಹಾಗೂ 20 ಮಂದಿ ಅನ್ಯ ಕಾರಣಗಳಿಂದ ನಿಧನರಾಗಿದ್ದಾರೆ.</p>.<p>ಬುಧವಾರ 1,346 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, 1,171 ವರದಿಗಳು ನೆಗೆಟಿವ್ ಬಂದಿವೆ.</p>.<p>ದೃಢಪಟ್ಟ 175 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 61, ಕೊಳ್ಳೇಗಾಲದಲ್ಲಿ 40, ಗುಂಡ್ಲುಪೇಟೆಯಲ್ಲಿ 37, ಹನೂರು ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಕ್ರಮವಾಗಿ 18 ಮತ್ತು 17 ಹಾಗೂ ಹೊರಜಿಲ್ಲೆಯ ಎರಡು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಬುಧವಾರ ದಾಖಲೆ 175 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ.</p>.<p>ಕಳೆದ ವರ್ಷದ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಲು ಆರಂಭಿಸಿದ ನಂತರ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ದೃಢಪಡುತ್ತಿರುವುದು ಇದೇ ಮೊದಲು.</p>.<p>ಬುಧವಾರ 73 ಜನರು ಕೋವಿಡ್ ಮುಕ್ತರಾಗಿದ್ದಾರೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 726ಕ್ಕೆ ಏರಿದೆ. ಈ ಪೈಕಿ 466 ಮಂದಿ ಹೋಂ ಐಸೋಲೇಶನ್ನಲ್ಲಿದ್ದಾರೆ. ಬುಧವಾರ ಸಾವಿನ ಪ್ರಕರಣಗಳು ವರದಿಯಾಗಿಲ್ಲ.</p>.<p>ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 8,241ಕ್ಕೆ ಏರಿದೆ. 7,376 ಮಂದಿ ಸೋಂಕು ಮುಕ್ತರಾಗಿದ್ದಾರೆ. 119 ಮಂದಿ ಕೋವಿಡ್ನಿಂದ ಹಾಗೂ 20 ಮಂದಿ ಅನ್ಯ ಕಾರಣಗಳಿಂದ ನಿಧನರಾಗಿದ್ದಾರೆ.</p>.<p>ಬುಧವಾರ 1,346 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, 1,171 ವರದಿಗಳು ನೆಗೆಟಿವ್ ಬಂದಿವೆ.</p>.<p>ದೃಢಪಟ್ಟ 175 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ 61, ಕೊಳ್ಳೇಗಾಲದಲ್ಲಿ 40, ಗುಂಡ್ಲುಪೇಟೆಯಲ್ಲಿ 37, ಹನೂರು ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಕ್ರಮವಾಗಿ 18 ಮತ್ತು 17 ಹಾಗೂ ಹೊರಜಿಲ್ಲೆಯ ಎರಡು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>