ಈರುಳ್ಳಿ ಬೆಳೆ ನಷ್ಟದ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜು ಅವರು, ‘ಮುಂಗಾರು ಅವಧಿಯಲ್ಲಿ ತಾಲ್ಲೂಕಿನಲ್ಲಿ 300 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಈ ಪೈಕಿ ಬಹುತೇಕ ರೈತರು ಈಗಾಗಲೇ ಕಟಾವು ಮಾಡಿ ಮಾರಾಟ ಮಾಡಿದ್ದಾರೆ. 70ರಿಂದ 80 ಹೆಕ್ಟೇರ್ನಷ್ಟು ಪ್ರದೇಶದಲ್ಲಿ ಕಟಾವು ಬಾಕಿದ್ದು, ಈಗ ಮಳೆಗೆ ಸಿಲುಕಿದೆ’ ಎಂದರು.