‘ಸಂಘಟನೆಯ ರಾಜ್ಯ ಸಮಿತಿಯ ಸೂಚನೆಯಂತೆ ಜಿಲ್ಲೆಯ ನೂರಾರು ಪಿಯುಸಿ, ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ಮನವಿಯನ್ನು ಸಾಮಾಜಿಕ ಜಾಲತಾಣಗಳು, ಮತ್ತು ಇ- ಮೇಲ್ ಮೂಲಕ, ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳು, ಪರೀಕ್ಷಾ ಮಂಡಳಿ ಮತ್ತು ವಿಶ್ವವಿದ್ಯಾಲಯಗಳಿಗೆ ಸಲ್ಲಿಸಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಆಸೀಯಾ ಬೇಗಂ ಅವರು ತಿಳಿಸಿದ್ದಾರೆ.