<p><strong>ಚಾಮರಾಜನಗರ: </strong>ಕೋವಿಡ್–19 ಕಾರಣದಿಂದ ಸಿಇಟಿ ಮುಂದೂಡುವಂತೆ, ಪದವಿ, ಎಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಜಿಲ್ಲಾ ಘಟಕದ ಪ್ರತಿನಿಧಿಗಳು ಗುರುವಾರ ಆನ್ಲೈನ್ ಪ್ರತಿಭಟನೆ ನಡೆಸಿದರು.</p>.<p>ಪರೀಕ್ಷೆಗಳನ್ನು ರದ್ದುಪಡಿಸುವಂತೆ ಹಾಗೂ ಈಗಾಗಲೇ ಕಟ್ಟಿಸಿಕೊಂಡಿರುವ ಪರೀಕ್ಷಾ ಶುಲ್ಕವನ್ನು ಮರುಪಾವತಿ ಮಾಡುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಭಾನುವಾರ ಆನ್ಲೈನ್ ಪ್ರತಿಭಟನೆ ಹಮ್ಮಿಕೊಳ್ಳಲುಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನಿರ್ಧರಿಸಿತ್ತು.</p>.<p>‘ಸಂಘಟನೆಯ ರಾಜ್ಯ ಸಮಿತಿಯ ಸೂಚನೆಯಂತೆ ಜಿಲ್ಲೆಯ ನೂರಾರು ಪಿಯುಸಿ, ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ಮನವಿಯನ್ನು ಸಾಮಾಜಿಕ ಜಾಲತಾಣಗಳು, ಮತ್ತು ಇ- ಮೇಲ್ ಮೂಲಕ, ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳು, ಪರೀಕ್ಷಾ ಮಂಡಳಿ ಮತ್ತು ವಿಶ್ವವಿದ್ಯಾಲಯಗಳಿಗೆ ಸಲ್ಲಿಸಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಆಸೀಯಾ ಬೇಗಂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೋವಿಡ್–19 ಕಾರಣದಿಂದ ಸಿಇಟಿ ಮುಂದೂಡುವಂತೆ, ಪದವಿ, ಎಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಜಿಲ್ಲಾ ಘಟಕದ ಪ್ರತಿನಿಧಿಗಳು ಗುರುವಾರ ಆನ್ಲೈನ್ ಪ್ರತಿಭಟನೆ ನಡೆಸಿದರು.</p>.<p>ಪರೀಕ್ಷೆಗಳನ್ನು ರದ್ದುಪಡಿಸುವಂತೆ ಹಾಗೂ ಈಗಾಗಲೇ ಕಟ್ಟಿಸಿಕೊಂಡಿರುವ ಪರೀಕ್ಷಾ ಶುಲ್ಕವನ್ನು ಮರುಪಾವತಿ ಮಾಡುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಭಾನುವಾರ ಆನ್ಲೈನ್ ಪ್ರತಿಭಟನೆ ಹಮ್ಮಿಕೊಳ್ಳಲುಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನಿರ್ಧರಿಸಿತ್ತು.</p>.<p>‘ಸಂಘಟನೆಯ ರಾಜ್ಯ ಸಮಿತಿಯ ಸೂಚನೆಯಂತೆ ಜಿಲ್ಲೆಯ ನೂರಾರು ಪಿಯುಸಿ, ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ಮನವಿಯನ್ನು ಸಾಮಾಜಿಕ ಜಾಲತಾಣಗಳು, ಮತ್ತು ಇ- ಮೇಲ್ ಮೂಲಕ, ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳು, ಪರೀಕ್ಷಾ ಮಂಡಳಿ ಮತ್ತು ವಿಶ್ವವಿದ್ಯಾಲಯಗಳಿಗೆ ಸಲ್ಲಿಸಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಆಸೀಯಾ ಬೇಗಂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>