<p><strong>ಚಾಮರಾಜನಗರ:</strong> ‘ಬೆಂಗಳೂರಿನಲ್ಲಿ ಈಚೆಗೆ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ನೀಡಿರುವ ರಾಜ್ಯ ಸರ್ಕಾರ, 4 ವರ್ಷಗಳ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಅಸುನೀಗಿದ 34 ಮಂದಿಯ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಿಲ್ಲ’ ಎಂದು ದಲಿತ, ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.</p>.<p>‘ಕಾಲ್ತುಳಿತ ಹಾಗೂ ಆಕ್ಸಿಜನ್ ದುರಂತ ಪ್ರಕರಣಗಳಲ್ಲಿ ಸರ್ಕಾರ ತಾರತಮ್ಯ ಅನುಸರಿಸಿದೆ. ಜನಾಕ್ರೋಶ ಹೆಚ್ಚಾಗುವ ಪ್ರಕರಣಗಳಿಗೆ ಒಂದು ರೀತಿ, ಇತರ ಪ್ರಕರಣಗಳಿಗೆ ಮತ್ತೊಂದು ರೀತಿಯ ಪರಿಹಾರ ನೀಡಿ ಅಮಾಯಕರ ಸಾವಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಆರೋಪಿಸಿವೆ. </p>.<p>‘ಸರ್ಕಾರ ಮಲತಾಯಿ ಧೋರಣೆ ಬಿಟ್ಟು ಆಕ್ಸಿಜನ್ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ದಲಿತ ಮುಖಂಡ ಸಿ.ಎಂ. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಚರ್ಚೆ ನಡೆಯುತ್ತಿದೆ.</p>.<p><strong>ಪ್ರಕರಣದ ಹಿನ್ನೆಲೆ:</strong></p>.<p>2021ರ ಮೇ 2ರಂದು ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 36 ಮಂದಿ ಅಸುನೀಗಿದರು. ಮೃತರ ಪೈಕಿ ಹೆಚ್ಚಿನವರು ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರು. ಕೋವಿಡ್–19ನಿಂದ ಪ್ರಾಣ ಉಳಿಸಿಕೊಳ್ಳಲು ಬಂದವರು ಸಕಾಲದಲ್ಲಿ ಆಮ್ಲಜನಕ ಸಿಗದೆ ನರಳಿ ಜೀವ ಬಿಡಬೇಕಾಯಿತು. ಈ ದುರ್ಘಟನೆ ನಡೆದು 4 ವರ್ಷಗಳು ಕಳೆದರೂ ಸಂತ್ರಸ್ತರಿಗೆ ಸಮರ್ಪಕವಾದ ಪರಿಹಾರವಾಗಲಿ, ಆಶ್ವಾಸನೆಯಂತೆ ಸರ್ಕಾರಿ ಉದ್ಯೋಗವಾಗಲಿ ಸಿಕ್ಕಿಲ್ಲ. ಇಂದಲ್ಲ; ನಾಳೆ ಪರಿಹಾರ ಹಾಗೂ ಉದ್ಯೋಗ ಸಿಗಬಹುದು ಎಂಬ ನಿರೀಕ್ಷೆಯೊಂದಿಗೆ ಸಂತ್ರಸ್ತರ ಕುಟುಂಬಗಳು ದಿನ ದೂಡುತ್ತಿವೆ.</p>.<p><strong>ಪರಿಹಾರ ಸಿಕ್ಕಿದ್ದೆಷ್ಟು:</strong></p>.<p>ದುರಂತ ಸಂಬಂಧ ಹೈಕೋರ್ಟ್ ನೇಮಿಸಿದ್ದ ಸಮಿತಿಯ ವರದಿ ಆಧರಿಸಿ ಸರ್ಕಾರ 13 ಕುಟುಂಬಗಳಿಗೆ ತಲಾ ₹ 5 ಲಕ್ಷ, 11 ಕುಟಂಬಗಳಿಗೆ ತಲಾ ₹ 2 ಲಕ್ಷ ಪರಿಹಾರ ನೀಡಿದೆ. ಉಳಿದ 12 ಕುಟುಂಬಗಳಿಗೆ ಕಾಂಗ್ರೆಸ್ ಪಕ್ಷದಿಂದ ತಲಾ ₹ 1 ಲಕ್ಷ ಪರಿಹಾರವಷ್ಟೆ ಸಿಕ್ಕಿದೆ. </p>.<p>‘ಭಾರತ್ ಜೋಡೊ’ ಯಾತ್ರೆ ಭಾಗವಾಗಿ ಗುಂಡ್ಲುಪೇಟೆ ತಾಲ್ಲೂಕಿಗೆ ಬಂದಿದ್ದ ರಾಹುಲ್ ಗಾಂಧಿ, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಕೆಲಸ ನೀಡಲಾಗುವುದು’ ಎಂಬ ಭರವಸೆ ಕೊಟ್ಟಿದ್ದರು. ರಾಹುಲ್ ವಾಗ್ದಾನಕ್ಕೆ ಡಿ.ಕೆ. ಶಿವಕುಮಾರ್ ಸಾಕ್ಷಿಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಭರವಸೆ ಈಡೇರಿಲ್ಲ’ ಎಂದು ದೂರುತ್ತಾರೆ ಸಂತ್ರಸ್ತರ ಪರ ಹೋರಾಟದಲ್ಲಿ ನಿರತರಾಗಿರುವ ಮಹೇಶ್ ಗಾಳಿಪುರ.</p>.<p><strong>ಸಂತ್ರಸ್ತರ ನಿರೀಕ್ಷೆ ಏನಿತ್ತು:</strong> ‘ಈಚೆಗೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಉದ್ಯೋಗ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ಮುಂಬರುವ ಸಚಿವ ಸಂಪುಟದಲ್ಲಾದರೂ ಬೇಡಿಕೆ ಈಡೇರಬಹುದು ಎಂಬ ನಿರೀಕ್ಷೆ ಇದೆ’ ಎನ್ನುತ್ತಾರೆ ಸಂತ್ರಸ್ತೆ ಜ್ಯೋತಿ. </p>.<div><blockquote>ಕಾಲ್ತುಳಿತದಲ್ಲಿ ಮೃತರಾದವರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಣೆ ಉತ್ತಮ ನಿರ್ಧಾರ. ಆದರೆ ಸರ್ಕಾರದ ಬೇಜವಾಬ್ದಾರಿಯಿಂದ ಆಮ್ಲಜನಕ ಸಿಗದೆ ಮೃತಪಟ್ಟ 36 ಜನರ ಸಾವಿನ ಬಗ್ಗೆ ಕರುಣೆ ತೋರಿಲ್ಲ </blockquote><span class="attribution">ಜ್ಯೋತಿ ಬಿಸಲವಾಡಿ ಸಂತ್ರಸ್ತೆ</span></div>.<p><strong>ಇಂದು ಸಭೆ</strong></p><p> ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಹೋರಾಟ ರೂಪಿಸುವ ಸಂಬಂಧ ಜೂನ್ 10ರಂದು ಬೆಳಿಗ್ಗೆ 11.30ಕ್ಕೆ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಪ್ರಗತಿಪರ ರೈತಪರ ಕನ್ನಡಪರ ದಲಿತಪರ ಹೋರಾಟಗಾರರ ಹಾಗೂ ಸಂತ್ರಸ್ತರ ಸಭೆ ಕರೆಯಲಾಗಿದೆ ಎಂದು ದಲಿತ ಮುಖಂಡ ಸಿ.ಎಂ.ಕೃಷ್ಣಮೂರ್ತಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಬೆಂಗಳೂರಿನಲ್ಲಿ ಈಚೆಗೆ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ನೀಡಿರುವ ರಾಜ್ಯ ಸರ್ಕಾರ, 4 ವರ್ಷಗಳ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಅಸುನೀಗಿದ 34 ಮಂದಿಯ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಿಲ್ಲ’ ಎಂದು ದಲಿತ, ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.</p>.<p>‘ಕಾಲ್ತುಳಿತ ಹಾಗೂ ಆಕ್ಸಿಜನ್ ದುರಂತ ಪ್ರಕರಣಗಳಲ್ಲಿ ಸರ್ಕಾರ ತಾರತಮ್ಯ ಅನುಸರಿಸಿದೆ. ಜನಾಕ್ರೋಶ ಹೆಚ್ಚಾಗುವ ಪ್ರಕರಣಗಳಿಗೆ ಒಂದು ರೀತಿ, ಇತರ ಪ್ರಕರಣಗಳಿಗೆ ಮತ್ತೊಂದು ರೀತಿಯ ಪರಿಹಾರ ನೀಡಿ ಅಮಾಯಕರ ಸಾವಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಆರೋಪಿಸಿವೆ. </p>.<p>‘ಸರ್ಕಾರ ಮಲತಾಯಿ ಧೋರಣೆ ಬಿಟ್ಟು ಆಕ್ಸಿಜನ್ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ದಲಿತ ಮುಖಂಡ ಸಿ.ಎಂ. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಚರ್ಚೆ ನಡೆಯುತ್ತಿದೆ.</p>.<p><strong>ಪ್ರಕರಣದ ಹಿನ್ನೆಲೆ:</strong></p>.<p>2021ರ ಮೇ 2ರಂದು ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 36 ಮಂದಿ ಅಸುನೀಗಿದರು. ಮೃತರ ಪೈಕಿ ಹೆಚ್ಚಿನವರು ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರು. ಕೋವಿಡ್–19ನಿಂದ ಪ್ರಾಣ ಉಳಿಸಿಕೊಳ್ಳಲು ಬಂದವರು ಸಕಾಲದಲ್ಲಿ ಆಮ್ಲಜನಕ ಸಿಗದೆ ನರಳಿ ಜೀವ ಬಿಡಬೇಕಾಯಿತು. ಈ ದುರ್ಘಟನೆ ನಡೆದು 4 ವರ್ಷಗಳು ಕಳೆದರೂ ಸಂತ್ರಸ್ತರಿಗೆ ಸಮರ್ಪಕವಾದ ಪರಿಹಾರವಾಗಲಿ, ಆಶ್ವಾಸನೆಯಂತೆ ಸರ್ಕಾರಿ ಉದ್ಯೋಗವಾಗಲಿ ಸಿಕ್ಕಿಲ್ಲ. ಇಂದಲ್ಲ; ನಾಳೆ ಪರಿಹಾರ ಹಾಗೂ ಉದ್ಯೋಗ ಸಿಗಬಹುದು ಎಂಬ ನಿರೀಕ್ಷೆಯೊಂದಿಗೆ ಸಂತ್ರಸ್ತರ ಕುಟುಂಬಗಳು ದಿನ ದೂಡುತ್ತಿವೆ.</p>.<p><strong>ಪರಿಹಾರ ಸಿಕ್ಕಿದ್ದೆಷ್ಟು:</strong></p>.<p>ದುರಂತ ಸಂಬಂಧ ಹೈಕೋರ್ಟ್ ನೇಮಿಸಿದ್ದ ಸಮಿತಿಯ ವರದಿ ಆಧರಿಸಿ ಸರ್ಕಾರ 13 ಕುಟುಂಬಗಳಿಗೆ ತಲಾ ₹ 5 ಲಕ್ಷ, 11 ಕುಟಂಬಗಳಿಗೆ ತಲಾ ₹ 2 ಲಕ್ಷ ಪರಿಹಾರ ನೀಡಿದೆ. ಉಳಿದ 12 ಕುಟುಂಬಗಳಿಗೆ ಕಾಂಗ್ರೆಸ್ ಪಕ್ಷದಿಂದ ತಲಾ ₹ 1 ಲಕ್ಷ ಪರಿಹಾರವಷ್ಟೆ ಸಿಕ್ಕಿದೆ. </p>.<p>‘ಭಾರತ್ ಜೋಡೊ’ ಯಾತ್ರೆ ಭಾಗವಾಗಿ ಗುಂಡ್ಲುಪೇಟೆ ತಾಲ್ಲೂಕಿಗೆ ಬಂದಿದ್ದ ರಾಹುಲ್ ಗಾಂಧಿ, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಕೆಲಸ ನೀಡಲಾಗುವುದು’ ಎಂಬ ಭರವಸೆ ಕೊಟ್ಟಿದ್ದರು. ರಾಹುಲ್ ವಾಗ್ದಾನಕ್ಕೆ ಡಿ.ಕೆ. ಶಿವಕುಮಾರ್ ಸಾಕ್ಷಿಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಭರವಸೆ ಈಡೇರಿಲ್ಲ’ ಎಂದು ದೂರುತ್ತಾರೆ ಸಂತ್ರಸ್ತರ ಪರ ಹೋರಾಟದಲ್ಲಿ ನಿರತರಾಗಿರುವ ಮಹೇಶ್ ಗಾಳಿಪುರ.</p>.<p><strong>ಸಂತ್ರಸ್ತರ ನಿರೀಕ್ಷೆ ಏನಿತ್ತು:</strong> ‘ಈಚೆಗೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಉದ್ಯೋಗ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ಮುಂಬರುವ ಸಚಿವ ಸಂಪುಟದಲ್ಲಾದರೂ ಬೇಡಿಕೆ ಈಡೇರಬಹುದು ಎಂಬ ನಿರೀಕ್ಷೆ ಇದೆ’ ಎನ್ನುತ್ತಾರೆ ಸಂತ್ರಸ್ತೆ ಜ್ಯೋತಿ. </p>.<div><blockquote>ಕಾಲ್ತುಳಿತದಲ್ಲಿ ಮೃತರಾದವರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಣೆ ಉತ್ತಮ ನಿರ್ಧಾರ. ಆದರೆ ಸರ್ಕಾರದ ಬೇಜವಾಬ್ದಾರಿಯಿಂದ ಆಮ್ಲಜನಕ ಸಿಗದೆ ಮೃತಪಟ್ಟ 36 ಜನರ ಸಾವಿನ ಬಗ್ಗೆ ಕರುಣೆ ತೋರಿಲ್ಲ </blockquote><span class="attribution">ಜ್ಯೋತಿ ಬಿಸಲವಾಡಿ ಸಂತ್ರಸ್ತೆ</span></div>.<p><strong>ಇಂದು ಸಭೆ</strong></p><p> ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಹೋರಾಟ ರೂಪಿಸುವ ಸಂಬಂಧ ಜೂನ್ 10ರಂದು ಬೆಳಿಗ್ಗೆ 11.30ಕ್ಕೆ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಪ್ರಗತಿಪರ ರೈತಪರ ಕನ್ನಡಪರ ದಲಿತಪರ ಹೋರಾಟಗಾರರ ಹಾಗೂ ಸಂತ್ರಸ್ತರ ಸಭೆ ಕರೆಯಲಾಗಿದೆ ಎಂದು ದಲಿತ ಮುಖಂಡ ಸಿ.ಎಂ.ಕೃಷ್ಣಮೂರ್ತಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>