ಜಿಲ್ಲೆಗೆ ಆಮ್ಲಜನಕ ಪೂರೈಕೆ ವಿಚಾರಕ್ಕೆ ಸಂಬಂಧಿಸಿದ ವೈರಲ್ ಆಗಿರುವ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ದುರಂತ ನಡೆದು ಒಂದು ತಿಂಗಳ ಬಳಿಕ ಆಡಿಯೊ ಬಿಡುಗಡೆ ಮಾಡಲಾಗಿದೆ. ಮೈಸೂರಿನ ಜಿಲ್ಲಾಧಿಕಾರಿ ಮೌಖಿಕವಾಗಿ ಏನು ನಿರ್ದೇಶನ ನೀಡಿದ್ದರು ಎಂಬುದು ಗೊತ್ತಿದೆ ಎಂದು ಅಲ್ಲಿನ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಹಾಗಿದ್ದರೆ, ಈ ಘಟನೆಗೆ ಪ್ರತಾಪ್ ಅವರೂ ಕಾರಣರಾಗಿದ್ದಾರೆ’ ಎಂದು ಹೇಳಿದರು.