ಚಾಮರಾಜನಗರ: ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟ 24 ಮಂದಿಯ ಪೈಕಿ 22 ಜನರ ಕುಟುಂಬಸ್ರಿತಗೆ ತಲಾ ₹ 2 ಲಕ್ಷ ಪರಿಹಾರ ಧನವನ್ನು ಆರ್ಟಿಜಿಎಸ್ ಮೂಲಕ ಪಾವತಿಸಲಾಗಿದೆ.
ಮೃತಪಟ್ಟವರಲ್ಲಿ ಇಬ್ಬರು ಹಾಗೂಅವರ ಕಾನೂನು ಬದ್ದ ವಾರಸುದಾರರು ಬೆಂಗಳೂರು ಜಿಲ್ಲೆಗೆ ಸೇರಿದವರಾಗಿದ್ದು, ಇವರ ವಿವರಗಳು ಹಾಗೂ ದಾಖಲೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯವರಿಂದ ವರದಿ ಕೇಳಿ ಪತ್ರ ಬರೆಯಲಾಗಿದೆ. ವರದಿ ಬಂದ ಕೂಡಲೇ ಅವರ ಕುಟುಂಬಕ್ಕೆ ಪರಿಹಾರ ಜಮೆ ಮಾಡಲಾಗುತ್ತದೆ.
22 ಮೃತರ ವಾರಸುದಾರರಿಗೆ ಪರಿಹಾರ ಧನ ಪಾವತಿಸಿರುವ ಬಗ್ಗೆ ಅಡ್ವೊಕೇಟ್ ಜನರಲ್ ಅವರಿಗೆ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ.