<p><strong>ಚಾಮರಾಜನಗರ:</strong> ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ಭಾಗಿಯಾಗಿ ಸಿ.ಎಂಗೆ ಮನವಿ ಸಲ್ಲಿಸಿದರು. </p>.<p>ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಎಂ ನೇತೃತ್ವದಲ್ಲಿ ಜನಸ್ಪಂದನದಲ್ಲಿ ಭಾಗಿಯಾದ ಸಂತ್ರಸ್ತರು, ‘ಕಾಯಂ ಸರ್ಕಾರಿ ನೌಕರಿಯನ್ನು ನೀಡಬೇಕು’ ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. </p>.<p>‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ತಾತ್ಕಾಲಿಕ ಕೆಲಸ ನೀಡಲಾಗಿದೆ. ಅದನ್ನು 12–14 ಮಂದಿಯಷ್ಟೇ ಅನಿವಾರ್ಯವಾಗಿ ಒಪ್ಪಿಕೊಂಡಿದ್ದಾರೆ’ ಎಂದು ಗಮನಕ್ಕೆ ತಂದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಈಗ ತಾತ್ಕಾಲಿಕ ಹುದ್ದೆಯಲ್ಲಿ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ಕಾಯಂ ನೌಕರಿ ನೀಡಲು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು. </p>.<p>ಸುನೀತಾ ಎಂಬುವವರು ಮಾತನಾಡಿ, ‘ನೀವು ಈ ಹಿಂದೆ 36 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಿರಿ. ಆದರೆ ಈಗ 32 ಜನರ ಕುಟುಂಬಗಳಿಗೆ ಮಾತ್ರ ಕೆಲಸ ನೀಡಲು ಮುಂದಾಗಿದ್ದೀರಿ. ನಮ್ಮ ಹೆಸರುಗಳನ್ನು ಕೈಬಿಡಲಾಗಿದೆ’ ಎಂದು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ‘ಸರ್ಕಾರ ಉಳಿದ ನಾಲ್ಕು ಜನರನ್ನು ಸೇರಿಸಲು ಕ್ರಮ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ಭಾಗಿಯಾಗಿ ಸಿ.ಎಂಗೆ ಮನವಿ ಸಲ್ಲಿಸಿದರು. </p>.<p>ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಎಂ ನೇತೃತ್ವದಲ್ಲಿ ಜನಸ್ಪಂದನದಲ್ಲಿ ಭಾಗಿಯಾದ ಸಂತ್ರಸ್ತರು, ‘ಕಾಯಂ ಸರ್ಕಾರಿ ನೌಕರಿಯನ್ನು ನೀಡಬೇಕು’ ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. </p>.<p>‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ತಾತ್ಕಾಲಿಕ ಕೆಲಸ ನೀಡಲಾಗಿದೆ. ಅದನ್ನು 12–14 ಮಂದಿಯಷ್ಟೇ ಅನಿವಾರ್ಯವಾಗಿ ಒಪ್ಪಿಕೊಂಡಿದ್ದಾರೆ’ ಎಂದು ಗಮನಕ್ಕೆ ತಂದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಈಗ ತಾತ್ಕಾಲಿಕ ಹುದ್ದೆಯಲ್ಲಿ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ಕಾಯಂ ನೌಕರಿ ನೀಡಲು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು. </p>.<p>ಸುನೀತಾ ಎಂಬುವವರು ಮಾತನಾಡಿ, ‘ನೀವು ಈ ಹಿಂದೆ 36 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಿರಿ. ಆದರೆ ಈಗ 32 ಜನರ ಕುಟುಂಬಗಳಿಗೆ ಮಾತ್ರ ಕೆಲಸ ನೀಡಲು ಮುಂದಾಗಿದ್ದೀರಿ. ನಮ್ಮ ಹೆಸರುಗಳನ್ನು ಕೈಬಿಡಲಾಗಿದೆ’ ಎಂದು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ‘ಸರ್ಕಾರ ಉಳಿದ ನಾಲ್ಕು ಜನರನ್ನು ಸೇರಿಸಲು ಕ್ರಮ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>