ಸಿದ್ದಪ್ಪಾಜಿ ದರ್ಶನ: ಜಿಲ್ಲೆ, ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸಿದ್ದಪ್ಪಾಜಿಯವರ ದರ್ಶನ ಪಡೆದು ವಿವಿಧ ಹರಕೆ ಸಲ್ಲಿಸಿದರು. ಪ್ರಾಣಿ ಬಲಿ ನಿಷೇಧಿಸಿದ್ದರಿಂದ ಕ್ಷೇತ್ರದ ಸುತ್ತಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ 8 ಕಡೆ ಚೆಕ್ಪೋಸ್ಟ್ ನಿರ್ಮಿಸಿ, ವಾಹನಗಳನ್ನು ತಪಾಸಣೆ ಮಾಡಿದರು.