ಗ್ರಾಮ ಲೆಕ್ಕಾಧಿಕಾರಿ ರಮಾನಂದ್ ಮಾತನಾಡಿ,ಜಿಲ್ಲಾಧಿಕಾರಿ ಅವರ ಆದೇಶದಂತೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜನರ ಬಳಿಗೆ ಹೋಗಿ ನಾಡ ಕಚೇರಿ, ಇತರೆ ಕಚೇರಿಗಳಿಗೆ ಅವರು ಅಲೆದಾಡುವುದನ್ನು ತಪ್ಪಿಸಲು ಕ್ರಮವಹಿಸಲಾಗಿದೆ. ಮನೆ ಬಾಗಿಲಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಅರ್ಜಿ ಸ್ವೀಕರಿಸಿ ಪಿಂಚಣಿ ಮಂಜೂರು ಮಾಡುವ ವಿನೂತನ ಯೋಜನೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.