ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಪಿಂಚಣಿ ಅದಾಲತ್‌ ಸದುಪಯೋಗಕ್ಕೆ ಸಲಹೆ

Last Updated 13 ಆಗಸ್ಟ್ 2021, 3:41 IST
ಅಕ್ಷರ ಗಾತ್ರ

ಚೇಳೂರು: ‘ಜಿಲ್ಲಾಡಳಿತದ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಅಂಗವಾಗಿ ಪಾಳ್ಯಕೆರೆ ಗ್ರಾಮ ಲೆಕ್ಕಾಧಿಕಾರಿ ಎನ್. ರಮಾನಂದ್ ಹಾಗೂ ಗ್ರಾಮ ಸಹಾಯಕಿ ಲಕ್ಷ್ಮೀದೇವಮ್ಮ ಅವರು ತಾಲ್ಲೂಕಿನಅಬ್ಬರವಾರಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಆಲಿಸಿದರು.

ಗ್ರಾಮ ಲೆಕ್ಕಾಧಿಕಾರಿ ರಮಾನಂದ್ ಮಾತನಾಡಿ,ಜಿಲ್ಲಾಧಿಕಾರಿ ಅವರ ಆದೇಶದಂತೆ ಪಿಂಚಣಿ ಅದಾಲತ್‌ ಹಮ್ಮಿಕೊಳ್ಳಲಾಗಿದೆ. ಜನರ ಬಳಿಗೆ ಹೋಗಿ ನಾಡ ಕಚೇರಿ, ಇತರೆ ಕಚೇರಿಗಳಿಗೆ ಅವರು ಅಲೆದಾಡುವುದನ್ನು ತಪ್ಪಿಸಲು ಕ್ರಮವಹಿಸಲಾಗಿದೆ. ಮನೆ ಬಾಗಿಲಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಅರ್ಜಿ ಸ್ವೀಕರಿಸಿ ಪಿಂಚಣಿ ಮಂಜೂರು ಮಾಡುವ ವಿನೂತನ ಯೋಜನೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಕೊರೊನಾ ಮೂರನೇ ಅಲೆ ತಡೆಯಲು ಜನರು ಸಹಕರಿಸಬೇಕು. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದರು.

ಪಾಳ್ಯಕರೆ ಗ್ರಾ.ಪಂ ಮಾಜಿ ಸದಸ್ಯ ನಾಗಪ್ಪ, ವಿ. ವಿನಯ್‍ಕಮಾರ್ (ಬಾಬು) ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT