<p><strong>ಚಾಮರಾಜನಗರ</strong>: ಜಿಲ್ಲೆಯಾದ್ಯಂತ ಜನರು ಸಂಭ್ರಮ, ಸಡಗರದ ಗಣೇಶ ಹಬ್ಬ ಆಚರಿಸುತ್ತಿದ್ದಾರೆ.</p>.<p>ಮಂಗಳವಾರ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಬುಧವಾರ ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಇದೆ. ಹಾಗಾಗಿ, ಹಬ್ಬದ ಸಂಭ್ರಮ ಮೇರೆ ಮೀರಿದೆ.</p>.<p>ಮನೆ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜನರು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.</p>.<p>ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳು ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿವೆ. ನಗರ, ಪಟ್ಟಣಗಳ ಬಡಾವಣೆಗಳು, ಗ್ರಾಮೀಣ ಭಾಗಗಳಲ್ಲೂ ಹಬ್ಬದ ಸಡಗರ ಕಂಡು ಬರುತ್ತಿದೆ.</p>.<p>ಗಣಪತಿ ಪ್ರತಿಷ್ಠಾಪನೆ: ಚಾಮರಾಜನಗರದ ವಿದ್ಯಾಗಣಪತಿ ಮಂಡಳಿ ವತಿಯಿಂದ 60ನೇ ವರ್ಷದ ಗಣೇಶೋತ್ಸವ ಹಮ್ಮಿಕೊಂಡಿದ್ದು, ನಗರದ ರಥದ ಬೀದಿಯಲ್ಲಿ ಧರ್ಮ ರಕ್ಷಾ ಗಣಪತಿಯ ಪ್ರತಿಷ್ಠಾಪನಾ ಕಾರ್ಯ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಿತು.</p>.<p>ಮಹದೇಶ್ವರ ಬೆಟ್ಟ: ಮಹದೇಶ್ವರ ಬೆಟ್ಟದ ವಿನಾಯಕ ಗೆಳೆಯರ ಬಳಗದ ವತಿಯಿಂದ ಆರನೇ ವರ್ಷದ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಟ್ಟದ ಬಸ್ ನಿಲ್ದಾಣದ ಬಳಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯಾದ್ಯಂತ ಜನರು ಸಂಭ್ರಮ, ಸಡಗರದ ಗಣೇಶ ಹಬ್ಬ ಆಚರಿಸುತ್ತಿದ್ದಾರೆ.</p>.<p>ಮಂಗಳವಾರ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಬುಧವಾರ ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಇದೆ. ಹಾಗಾಗಿ, ಹಬ್ಬದ ಸಂಭ್ರಮ ಮೇರೆ ಮೀರಿದೆ.</p>.<p>ಮನೆ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜನರು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.</p>.<p>ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳು ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿವೆ. ನಗರ, ಪಟ್ಟಣಗಳ ಬಡಾವಣೆಗಳು, ಗ್ರಾಮೀಣ ಭಾಗಗಳಲ್ಲೂ ಹಬ್ಬದ ಸಡಗರ ಕಂಡು ಬರುತ್ತಿದೆ.</p>.<p>ಗಣಪತಿ ಪ್ರತಿಷ್ಠಾಪನೆ: ಚಾಮರಾಜನಗರದ ವಿದ್ಯಾಗಣಪತಿ ಮಂಡಳಿ ವತಿಯಿಂದ 60ನೇ ವರ್ಷದ ಗಣೇಶೋತ್ಸವ ಹಮ್ಮಿಕೊಂಡಿದ್ದು, ನಗರದ ರಥದ ಬೀದಿಯಲ್ಲಿ ಧರ್ಮ ರಕ್ಷಾ ಗಣಪತಿಯ ಪ್ರತಿಷ್ಠಾಪನಾ ಕಾರ್ಯ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಿತು.</p>.<p>ಮಹದೇಶ್ವರ ಬೆಟ್ಟ: ಮಹದೇಶ್ವರ ಬೆಟ್ಟದ ವಿನಾಯಕ ಗೆಳೆಯರ ಬಳಗದ ವತಿಯಿಂದ ಆರನೇ ವರ್ಷದ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಟ್ಟದ ಬಸ್ ನಿಲ್ದಾಣದ ಬಳಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>