ಮಹದೇಶ್ವರ ಬೆಟ್ಟ ವ್ಯಾಪ್ತಿಯ ತೋಕೆರೆ, ದೊಡ್ಡಾಣೆ, ಕೊಕ್ಬರೆ, ಇಂಡಿಗನತ್ತ, ಪಡಸಲನತ್ತ, ತುಳಸಿಕೆರೆ ಹಾಗೂ ಮೀಣ್ಯಂ ಗ್ರಾಮಪಂಚಾಯಿತಿಯ ನಕ್ಕಂದಿ ಗ್ರಾಮದಲ್ಲಿ ಈಗಾಗಲೇ ಸಮಸ್ಯೆ ಉಂಟಾಗಿದೆ. ಕೆರೆಗಳು, ತೋಡುಬಾವಿಗಳಲ್ಲಿ ನೀರು ಬತ್ತುತ್ತಿದೆ. ಕೈಪಂಪುಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.