ಆದರೆ, ಮಂಜುನಾಥ್ ಅವರು ಇದನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಅವರು, ‘ನಾನು ಕ್ಷೇತ್ರದಲ್ಲಿ ಮೂರು ವರ್ಷಗಳಿಂದ ಸುತ್ತಾಡುತ್ತಿದ್ದೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವರಿಗೆ, ನಿರ್ಗತಿಕರಿಗೆ ಮತ್ತು ಗ್ರಾಮಗಳಲ್ಲಿ ದೇವಾಲಯಗಳ ಅಭಿವೃದ್ಧಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತಾ ಬಂದಿದ್ದೇನೆ’ ಎಂದರು.