ಘಟನೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್, ‘15 ವರ್ಷದ ಅನ್ಯಕೋಮಿನ ಹುಡುಗನೊಬ್ಬ ಸೈಕಲ್ ವೀಲಿಂಗ್ ಮಾಡುತ್ತಿರುವಾಗ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೊಂದು ಸಮುದಾಯದ ಯುವಕನಿಗೆ ತಾಗಿದೆ. ಇದನ್ನು ಪ್ರಶ್ನಿಸಿದ್ದ ಯುವಕ, ಹುಡುಗನನ್ನು ಗದರಿಸಿ ಕೈಯಲ್ಲಿ ಹೊಡೆದು ಕಳಿಸಿದ್ದ. ಈ ವಿಚಾರವನ್ನು ಹುಡುಗ ತನ್ನಸಮುದಾಯವರಿಗೆ ಹೇಳಿದಾಗ ಅವರು ಗುಂಪು ಗೂಡಿಕೊಂಡು ಬಂದಿದ್ದಾರೆ. ಇವರೂ ಗುಂಪು ಸೇರಿದ್ದರು. ಈ ವೇಳೆ ಘರ್ಷಣೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಗುಂಪನ್ನು ಚದುರಿಸಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ’ ಎಂದರು.