ಇದರಿಂದಾಗಿ ಅದೇ ಬೀದಿಯಲ್ಲಿರುವ ಸಿದ್ದಪ್ಪ ಎಂಬುವವರ ಹಸುಗಳಿಗೆ ಮೇವಿನ ಕೊರತೆ ಉಂಟಾಯಿತು. ಸಾಮಾಜಿಕ ಕಾರ್ಯಕರ್ತ ಲೋಕೇಶ್ ಅವರು ವಾಟ್ಸ್ಆ್ಯಪ್ ಮೂಲಕ ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರಿಗೆ ತಿಳಿಸಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಅವರು, ಹಸುಗಳಿಗೆ ಮೇವಿನ ವ್ಯವಸ್ಥೆ ಮಾಡುವಂತೆ ಸಂತೇಮರಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಗೆ ತಿಳಿಸಿದ್ದರು.