<p><strong>ಸಂತೇಮರಹಳ್ಳಿ</strong>: ಜಾನುವಾರುಗಳಿಗೆ ಮೇವು ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಹೋಬಳಿಯ ವ್ಯಕ್ತಿಯೊಬ್ಬರ ಪೊಲೀಸರು ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.</p>.<p>ಸಂತೇಮರಹಳ್ಳಿ ಗ್ರಾಮದ ಹೊಸ ಬಡಾವಣೆಯೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್–19 ದೃಢಪಟ್ಟಿತ್ತು. ಇದರಿಂದ ಬಡಾವಣೆಯ ಒಂದು ಬೀದಿಯನ್ನು ಸೀಲ್ಡೌನ್ ಮಾಡಿ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿತ್ತು.</p>.<p>ಇದರಿಂದಾಗಿ ಅದೇ ಬೀದಿಯಲ್ಲಿರುವ ಸಿದ್ದಪ್ಪ ಎಂಬುವವರ ಹಸುಗಳಿಗೆ ಮೇವಿನ ಕೊರತೆ ಉಂಟಾಯಿತು. ಸಾಮಾಜಿಕ ಕಾರ್ಯಕರ್ತ ಲೋಕೇಶ್ ಅವರು ವಾಟ್ಸ್ಆ್ಯಪ್ ಮೂಲಕ ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರಿಗೆ ತಿಳಿಸಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಅವರು, ಹಸುಗಳಿಗೆ ಮೇವಿನ ವ್ಯವಸ್ಥೆ ಮಾಡುವಂತೆ ಸಂತೇಮರಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಗೆ ತಿಳಿಸಿದ್ದರು.</p>.<p>ತಕ್ಷಣವೇ ಠಾಣೆಯ ಸಿಬ್ಬಂದಿ ಹಸುಗಳಿಗೆ ಮೇವನ್ನು ಒದಗಿಸಿದ್ದಾರೆ. ಈ ವಿಚಾರವನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ನ ಅಧಿಕೃತ ಫೇಸ್ಬುಕ್ ಪೇಜ್ನಲ್ಲಿ ಹಂಚಿಕೊಳ್ಳಲಾಗಿದ್ದು, ಸ್ಥಳೀಯ ಪೊಲೀಸರ ಮಾನವೀಯ ಕಾರ್ಯ ಹಾಗೂ ಲೋಕೇಶ್ ಅವರ ಕಾಳಜಿಯನ್ನು ಶ್ಲಾಘಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಜಾನುವಾರುಗಳಿಗೆ ಮೇವು ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಹೋಬಳಿಯ ವ್ಯಕ್ತಿಯೊಬ್ಬರ ಪೊಲೀಸರು ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.</p>.<p>ಸಂತೇಮರಹಳ್ಳಿ ಗ್ರಾಮದ ಹೊಸ ಬಡಾವಣೆಯೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್–19 ದೃಢಪಟ್ಟಿತ್ತು. ಇದರಿಂದ ಬಡಾವಣೆಯ ಒಂದು ಬೀದಿಯನ್ನು ಸೀಲ್ಡೌನ್ ಮಾಡಿ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿತ್ತು.</p>.<p>ಇದರಿಂದಾಗಿ ಅದೇ ಬೀದಿಯಲ್ಲಿರುವ ಸಿದ್ದಪ್ಪ ಎಂಬುವವರ ಹಸುಗಳಿಗೆ ಮೇವಿನ ಕೊರತೆ ಉಂಟಾಯಿತು. ಸಾಮಾಜಿಕ ಕಾರ್ಯಕರ್ತ ಲೋಕೇಶ್ ಅವರು ವಾಟ್ಸ್ಆ್ಯಪ್ ಮೂಲಕ ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರಿಗೆ ತಿಳಿಸಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಅವರು, ಹಸುಗಳಿಗೆ ಮೇವಿನ ವ್ಯವಸ್ಥೆ ಮಾಡುವಂತೆ ಸಂತೇಮರಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಗೆ ತಿಳಿಸಿದ್ದರು.</p>.<p>ತಕ್ಷಣವೇ ಠಾಣೆಯ ಸಿಬ್ಬಂದಿ ಹಸುಗಳಿಗೆ ಮೇವನ್ನು ಒದಗಿಸಿದ್ದಾರೆ. ಈ ವಿಚಾರವನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ನ ಅಧಿಕೃತ ಫೇಸ್ಬುಕ್ ಪೇಜ್ನಲ್ಲಿ ಹಂಚಿಕೊಳ್ಳಲಾಗಿದ್ದು, ಸ್ಥಳೀಯ ಪೊಲೀಸರ ಮಾನವೀಯ ಕಾರ್ಯ ಹಾಗೂ ಲೋಕೇಶ್ ಅವರ ಕಾಳಜಿಯನ್ನು ಶ್ಲಾಘಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>