ಇದೇ ವೇಳೆ ಮಾತನಾಡಿದ ಆನಂದ್ ಪ್ರಕಾಶ್ ಮೀನಾ, ಎಲ್ಲ ಸರ್ಕಾರಿ ನೌಕರರು ತಪ್ಪದೆ ಮತದಾನ ಮಾಡಬೇಕು ಎಂಬುದು ಈ ಅಂಚೆ ಪತ್ರ ಅಭಿಯಾನದ ಉದ್ದೇಶ’ ಎಂದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ, ಜಿಲ್ಲೆಯ ಎಲ್ಲ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ನರೇಗಾ ಯೋಜನೆಯ ತಾಲ್ಲೂಕು ಸಂಯೋಜಕರು, ಅಧಿಕಾರಿಗಳು, ಇತರರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.