<p><strong>ಚಾಮರಾಜನಗರ:</strong> ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಸಹಕಾರ ಕುಕ್ಕುಟ ಮಹಾಮಂಡಳದ ವತಿಯಿಂದ ನಗರದ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ 121 ಫಲಾನುಭವಿಗಳಿಗೆ ಕೋಳಿಮರಿ ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಗಿರಿರಾಜ ತಳಿಯ ಕೋಳಿಮರಿಗಳನ್ನು ಪಡೆದಿರುವ ಫಲಾನುಭವಿಗಳು ಕೃಷಿ, ಹೈನುಗಾರಿಕೆಯ ಜೊತೆಗೆ ಉಪ ಆದಾಯ ಪಡೆಯಬಹುದಾಗಿದ್ದು ಆರ್ಥಿಕ ಸಬಲೀಕರಣಕ್ಕೆ ನೆರವಾಗಲಿದೆ. ವಿಶೇಷವಾಗಿ ಮಹಿಳೆಯರು ಕಾರ್ಯಕ್ರಮದ ಸವಲತ್ತು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಹನುಮೇಗೌಡ ಮಾತನಾಡಿ, ‘ಈಚೆಗೆ ಕೃಷಿ ಆಧಾರಿತ ಕಸುಬುಗಳಲ್ಲಿ ಒಂದಾದ ಕೋಳಿ ಸಾಕಣೆಯ ಮೂಲಕವೂ ಹೆಚ್ಚು ಲಾಭಗಳಿಸಲು ಅವಕಾಶವಿದ್ದು ಆಸಕ್ತರು ಸದುಪಯೋಗ ಮಾಡಿಕೊಳ್ಳಬೇಕು. ಕೋಳಿಸಾಕಣೆದಾರರು ಮೊದಲ 5 ವಾರ ಮರಿಗಳನ್ನು ಜೋಪಾನವಾಗಿರಿಸಿ ಆರೋಗ್ಯದ ಬಗ್ಗೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕೋಡಿಮೋಳೆ ಗೋವಿಂದಶೆಟ್ಟಿ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಜನಾರ್ದನ್, ವೈದ್ಯ ಮೂರ್ತಿ, ಮನೋಹರ್, ಮುಖಂಡ ಜೆ.ಬಿ.ಖಾನ್ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಸಹಕಾರ ಕುಕ್ಕುಟ ಮಹಾಮಂಡಳದ ವತಿಯಿಂದ ನಗರದ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ 121 ಫಲಾನುಭವಿಗಳಿಗೆ ಕೋಳಿಮರಿ ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಗಿರಿರಾಜ ತಳಿಯ ಕೋಳಿಮರಿಗಳನ್ನು ಪಡೆದಿರುವ ಫಲಾನುಭವಿಗಳು ಕೃಷಿ, ಹೈನುಗಾರಿಕೆಯ ಜೊತೆಗೆ ಉಪ ಆದಾಯ ಪಡೆಯಬಹುದಾಗಿದ್ದು ಆರ್ಥಿಕ ಸಬಲೀಕರಣಕ್ಕೆ ನೆರವಾಗಲಿದೆ. ವಿಶೇಷವಾಗಿ ಮಹಿಳೆಯರು ಕಾರ್ಯಕ್ರಮದ ಸವಲತ್ತು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಹನುಮೇಗೌಡ ಮಾತನಾಡಿ, ‘ಈಚೆಗೆ ಕೃಷಿ ಆಧಾರಿತ ಕಸುಬುಗಳಲ್ಲಿ ಒಂದಾದ ಕೋಳಿ ಸಾಕಣೆಯ ಮೂಲಕವೂ ಹೆಚ್ಚು ಲಾಭಗಳಿಸಲು ಅವಕಾಶವಿದ್ದು ಆಸಕ್ತರು ಸದುಪಯೋಗ ಮಾಡಿಕೊಳ್ಳಬೇಕು. ಕೋಳಿಸಾಕಣೆದಾರರು ಮೊದಲ 5 ವಾರ ಮರಿಗಳನ್ನು ಜೋಪಾನವಾಗಿರಿಸಿ ಆರೋಗ್ಯದ ಬಗ್ಗೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕೋಡಿಮೋಳೆ ಗೋವಿಂದಶೆಟ್ಟಿ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಜನಾರ್ದನ್, ವೈದ್ಯ ಮೂರ್ತಿ, ಮನೋಹರ್, ಮುಖಂಡ ಜೆ.ಬಿ.ಖಾನ್ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>