ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನುತ್ತೇನೆ, ತಿನ್ನುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದರು. ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈಗ ವಿರೋಧಪಕ್ಷ ನಾಯಕರಾಗಿದ್ದಾರೆ.ಅವರ ಹೇಳಿಕೆ ಸರಿಯಿಲ್ಲ ಎಂದಷ್ಟೇ ಹೇಳಿದ್ದೇನೆ’ ಎಂದು ಪಶ್ನೆಯೊಂದಕ್ಕೆ ಉತ್ತರಿಸಿದರು.