<p><strong>ಚಾಮರಾಜನಗರ:</strong> ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸುರಕ್ಷಾ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾಯೋಜನೆಯ ಪ್ರಯೋಜನವನ್ನು ಅರ್ಹರು ಪಡೆದುಕೊಳ್ಳಬೇಕು ಎಂದು ಇಂಟಿಗ್ರಾ ಕಂಪನಿಯ ಜಿಲ್ಲಾ ಸಂಯೋಜಕ ಸಿದ್ದರಾಜು ಸಲಹೆ ನೀಡಿದರು.</p>.<p>ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ನ ಅವರಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆಯಡಿ ಅಕಾಲಿಕ ಮರಣಕ್ಕೆ ತುತ್ತಾದ ಮಹದೇವ ಅವರ ಪತ್ನಿಗೆ ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.</p>.<p>ಜೀವನಜ್ಯೋತಿ ವಿಮಾ ಯೋಜನೆಯು ಸಮಾಜದ ಎಲ್ಲ ವರ್ಗದವರಿಗೊ ಅನ್ವಯವಾಗಲಿದೆ. ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿ ವಾರ್ಷಿಕ ₹ 20 ಪಾವತಿಸಿದರೆ ₹2 ಲಕ್ಷ ದುರ್ಘಟನೆ ವಿಮೆ ಪಡೆಯಬಹುದು. 18 ವರ್ಷ ಮೇಲ್ಪಟ್ಟು 70 ವರ್ಷದೊಳಗಿನವರು ಯೋಜನೆಯಡಿ ನೋಂದಣಿಗೆ ಅರ್ಹರಾಗಿರುತ್ತಾರೆ.</p>.<p>ಪ್ರಧಾನ ಮಂತ್ರಿ ಜೀವನಜ್ಯೋತಿವಿಮಾ ಯೋಜನೆಯಡಿ ₹ 342 ಪಾವತಿಸಿದರೆ ₹ 2 ಲಕ್ಷ ಜೀವವಿಮೆ ದೊರೆಯಲಿದೆ. 18 ವರ್ಷದಿಂದ 50 ವರ್ಷದೊಳಗಿನವರು ವಿಮೆಗೆ ನೋಂದಣಿ ಮಾಡಿಸಲು ಅರ್ಹರಾಗಿರುತ್ತಾರೆ. ಎರಡೂ ವಿಮೆಗಳು ಮೃತರ ಅವಲಂಬಿತರಿಗೆ ಅನುಕೂಲವಾಗಲಿದೆ. ಸಾರ್ವಜನಿಕರು ಸಮೀಪದ ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ವಿಮೆ ಮಾಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.</p>.<p>ಬ್ಯಾಂಕಿನ ವ್ಯವಸ್ಥಾಪಕ ಅವನೀಶ್ ಕುಮಾರ್ ಪಾಠಕ್ ಮಾತನಾಡಿ ಬ್ಯಾಂಕಿನಲ್ಲಿ ಈಗಾಗಲೇ ಹಲವರು ವಿಮಾ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದು, ಮೂವರು ಮೃತರ ಫಲಾನುವಗಳ ಕುಟುಂಬಕ್ಕೆ 2 ಲಕ್ಷ ಪರಿಹಾರ ವಿತರಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವನಿಕರು ವಿಮೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಈ ಸಂದರ್ಭ ಬ್ಯಾಂಕ್ನ ಕ್ಯಾಷಿಯರ್ ರಾಹುಲ್ ನಾಯಕ್, ಇಂಟಿಗ್ರಾ ಕಂಪನಿಯ ಮೇಲ್ವೀಚಾರಕ ಬಸವ ನಾಯಕ, ಎಸ್ಬಿಐ ವ್ಯವಹಾರ ಪ್ರತಿನಿಧಿ ಸುನಿಲ್, ಆಲೂರು ನಾಗೇಂದ್ರಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸುರಕ್ಷಾ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾಯೋಜನೆಯ ಪ್ರಯೋಜನವನ್ನು ಅರ್ಹರು ಪಡೆದುಕೊಳ್ಳಬೇಕು ಎಂದು ಇಂಟಿಗ್ರಾ ಕಂಪನಿಯ ಜಿಲ್ಲಾ ಸಂಯೋಜಕ ಸಿದ್ದರಾಜು ಸಲಹೆ ನೀಡಿದರು.</p>.<p>ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ನ ಅವರಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆಯಡಿ ಅಕಾಲಿಕ ಮರಣಕ್ಕೆ ತುತ್ತಾದ ಮಹದೇವ ಅವರ ಪತ್ನಿಗೆ ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.</p>.<p>ಜೀವನಜ್ಯೋತಿ ವಿಮಾ ಯೋಜನೆಯು ಸಮಾಜದ ಎಲ್ಲ ವರ್ಗದವರಿಗೊ ಅನ್ವಯವಾಗಲಿದೆ. ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿ ವಾರ್ಷಿಕ ₹ 20 ಪಾವತಿಸಿದರೆ ₹2 ಲಕ್ಷ ದುರ್ಘಟನೆ ವಿಮೆ ಪಡೆಯಬಹುದು. 18 ವರ್ಷ ಮೇಲ್ಪಟ್ಟು 70 ವರ್ಷದೊಳಗಿನವರು ಯೋಜನೆಯಡಿ ನೋಂದಣಿಗೆ ಅರ್ಹರಾಗಿರುತ್ತಾರೆ.</p>.<p>ಪ್ರಧಾನ ಮಂತ್ರಿ ಜೀವನಜ್ಯೋತಿವಿಮಾ ಯೋಜನೆಯಡಿ ₹ 342 ಪಾವತಿಸಿದರೆ ₹ 2 ಲಕ್ಷ ಜೀವವಿಮೆ ದೊರೆಯಲಿದೆ. 18 ವರ್ಷದಿಂದ 50 ವರ್ಷದೊಳಗಿನವರು ವಿಮೆಗೆ ನೋಂದಣಿ ಮಾಡಿಸಲು ಅರ್ಹರಾಗಿರುತ್ತಾರೆ. ಎರಡೂ ವಿಮೆಗಳು ಮೃತರ ಅವಲಂಬಿತರಿಗೆ ಅನುಕೂಲವಾಗಲಿದೆ. ಸಾರ್ವಜನಿಕರು ಸಮೀಪದ ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ವಿಮೆ ಮಾಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.</p>.<p>ಬ್ಯಾಂಕಿನ ವ್ಯವಸ್ಥಾಪಕ ಅವನೀಶ್ ಕುಮಾರ್ ಪಾಠಕ್ ಮಾತನಾಡಿ ಬ್ಯಾಂಕಿನಲ್ಲಿ ಈಗಾಗಲೇ ಹಲವರು ವಿಮಾ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದು, ಮೂವರು ಮೃತರ ಫಲಾನುವಗಳ ಕುಟುಂಬಕ್ಕೆ 2 ಲಕ್ಷ ಪರಿಹಾರ ವಿತರಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವನಿಕರು ವಿಮೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಈ ಸಂದರ್ಭ ಬ್ಯಾಂಕ್ನ ಕ್ಯಾಷಿಯರ್ ರಾಹುಲ್ ನಾಯಕ್, ಇಂಟಿಗ್ರಾ ಕಂಪನಿಯ ಮೇಲ್ವೀಚಾರಕ ಬಸವ ನಾಯಕ, ಎಸ್ಬಿಐ ವ್ಯವಹಾರ ಪ್ರತಿನಿಧಿ ಸುನಿಲ್, ಆಲೂರು ನಾಗೇಂದ್ರಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>