ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಾದ್ ಜೊತೆ ಎನ್.ಮಹೇಶ್ ಮಾತುಕತೆ

Last Updated 16 ಮಾರ್ಚ್ 2020, 22:10 IST
ಅಕ್ಷರ ಗಾತ್ರ

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸೋಮವಾರ‌ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ‌ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮೈತ್ರಿ ಸರ್ಕಾರದ ವಿಶ್ವಾತ‌ ಮತಯಾತನೆ ಸಂದರ್ಭದಲ್ಲಿ ಸದನಕ್ಕೆ‌ ಗೈರಾಗಿದ್ದಕ್ಕೆ ಬಿಎಸ್‌ಪಿಯಿಂದ ಉಚ್ಚಾಟನೆ ಗೊಂಡಿರುವ ಮಹೇಶ್, ಇತ್ತೀಚಿನ ದಿನಗಳಲ್ಲಿ ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಹೀಗಾಗಿ, ಬಿಜೆಪಿ ಸೇರುವ ಪ್ರಯತ್ನ ನಡೆಸಿದ್ದಾರೆಯೇ ಎಂಬ ಅನುಮಾನಗಳು ಮೂಡಿವೆ.

ಕೊಳ್ಳೇಗಾಲ ನಗರಸಭೆಯ ಆಡಳಿತ ಚುಕ್ಕಾಣಿ ಹಿಡಿಯಲೂ ಮಹೇಶ್ ಯತ್ನಿಸುತ್ತಿದ್ದಾರೆ. ಇದಕ್ಕಾಗಿ ಬಿಜೆಪಿ ಬೆಂಬಲ ಪಡೆಯುವುದು ಅನಿವಾರ್ಯ. ಈ ವಿಚಾರವಾಗಿಯೂ ಪ್ರಸಾದ್ ಅವರೊಂದಿಗೆ ಮಾತುಕತೆ‌ ನಡೆಸಿದ್ದಾರೆ.

‘ಪ್ರಸಾದ್‌–ಮಹೇಶ್‌ ಭೇಟಿ ನಡೆದಿರುವುದು ನಿಜ. ಆದರೆ, ಕೊಳ್ಳೇಗಾಲ ನಗರಸಭೆ ವಿಚಾರವಾಗಿ ಚರ್ಚೆ ನಡೆದಿದೆ. ಮಹೇಶ್‌ ಜೊತೆ ನಗರಸಭೆಯ 14 ಸದಸ್ಯರು ಬಂದಿದ್ದರು’ ಎಂದು ಪ್ರಸಾದ್‌ ಆಪ್ತರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT