<p><strong>ಚಾಮರಾಜನಗರ: </strong>ಸರ್ಕಾರಿ ಶಾಲಾ ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಖಾಸಗಿ ಶಾಲಾ ಮಕ್ಕಳಿಗೆ ಸ್ಪರ್ಧೆ ನೀಡುವಂತಹಪ್ರತಿಭೆ ಹೊಂದಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಎಂ. ಮಹದೇವಶೆಟ್ಟಿ ಹೇಳಿದರು.</p>.<p>ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸರ್ಕಾರಿಪ್ರೌಢಶಾಲೆಯಲ್ಲಿ ಬುಧವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳುಶೈಕ್ಷಣಿಕವಾಗಿಮುಂದಿದ್ದಾರೆ. ಇಂದು ಅವರು ಖಾಸಗಿಶಾಲೆಗಳಿಗೆ ಸ್ಪರ್ಧೆ ಒಡ್ಡುತ್ತಿದ್ದಾರೆ. ಉತ್ತಮ ಅಂಕಗಳನ್ನು ಪಡೆದುಕೊಂಡು ಶಾಲೆಗಳ ಹೆಸರನ್ನು ಬೆಳಗಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.</p>.<p>ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೆಚ್ಚಿಸುತ್ತಿದೆ. ಇದರಲ್ಲಿ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ಬಶೆಟ್ಟಿ, ಉಪಾಧ್ಯಕ್ಷೆ ಚಿಕ್ಕಮ್ಮಣಿ, ಪಿಎಸಿಸಿ ಅಧ್ಯಕ್ಷ ಬಂಗಾರು, ಎಸ್ಡಿಎಂಸಿಅಧ್ಯಕ್ಷ ಜಯಸ್ವಾಮಿ, ಮುಖಂಡರಾದ ಕೃಷ್ಣಶೆಟ್ಟಿ, ಕಾವೇರಿ ಶಿವಕುಮಾರ್, ಸಿಆರ್ಪಿ ಮೇರಿ ಕ್ರಿಸ್ಟನ್, ಮುಖ್ಯ ಶಿಕ್ಷಕ ಜಯಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಸರ್ಕಾರಿ ಶಾಲಾ ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಖಾಸಗಿ ಶಾಲಾ ಮಕ್ಕಳಿಗೆ ಸ್ಪರ್ಧೆ ನೀಡುವಂತಹಪ್ರತಿಭೆ ಹೊಂದಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಎಂ. ಮಹದೇವಶೆಟ್ಟಿ ಹೇಳಿದರು.</p>.<p>ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸರ್ಕಾರಿಪ್ರೌಢಶಾಲೆಯಲ್ಲಿ ಬುಧವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳುಶೈಕ್ಷಣಿಕವಾಗಿಮುಂದಿದ್ದಾರೆ. ಇಂದು ಅವರು ಖಾಸಗಿಶಾಲೆಗಳಿಗೆ ಸ್ಪರ್ಧೆ ಒಡ್ಡುತ್ತಿದ್ದಾರೆ. ಉತ್ತಮ ಅಂಕಗಳನ್ನು ಪಡೆದುಕೊಂಡು ಶಾಲೆಗಳ ಹೆಸರನ್ನು ಬೆಳಗಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.</p>.<p>ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೆಚ್ಚಿಸುತ್ತಿದೆ. ಇದರಲ್ಲಿ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ಬಶೆಟ್ಟಿ, ಉಪಾಧ್ಯಕ್ಷೆ ಚಿಕ್ಕಮ್ಮಣಿ, ಪಿಎಸಿಸಿ ಅಧ್ಯಕ್ಷ ಬಂಗಾರು, ಎಸ್ಡಿಎಂಸಿಅಧ್ಯಕ್ಷ ಜಯಸ್ವಾಮಿ, ಮುಖಂಡರಾದ ಕೃಷ್ಣಶೆಟ್ಟಿ, ಕಾವೇರಿ ಶಿವಕುಮಾರ್, ಸಿಆರ್ಪಿ ಮೇರಿ ಕ್ರಿಸ್ಟನ್, ಮುಖ್ಯ ಶಿಕ್ಷಕ ಜಯಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>