ಸೀಗಮಾರಮ್ಮ ದೇವಾಲಯದ ಅರ್ಚಕರು, ದೇವಿಗೆ ನಡೆದುಕೊಳ್ಳುವ ಒಕ್ಕಲಿನ ವ್ಯಕ್ತಿಯೊಬ್ಬರ (ನಾಯಕ ಜನಾಂಗದವರು) ಎದೆ ಮೇಲೆ ಕಾಲಿಟ್ಟಾಗ ಅವರ ಪ್ರಾಣ ಪಕ್ಷಿ ಹಾರಿಹೋಗುತ್ತದೆ (ಇದನ್ನೇ ಬಲಿ ಎಂದು ಹೇಳಲಾಗುತ್ತದೆ). ಆ ವ್ಯಕ್ತಿಯ ಮೆರವಣಿಗೆಯನ್ನು ಶವ ಮೆರವಣಿಗೆ ರೀತಿಯಲ್ಲಿ ಮಾಡಲಾಗುತ್ತದೆ. ಮೆರವಣಿಗೆ ಎಲ್ಲ ಮುಗಿದ ಬಳಿಕ ದೇವಿಯ ತೀರ್ಥವನ್ನು ಪ್ರೋಕ್ಷಣೆ ಮಾಡಿದಾಗ ವ್ಯಕ್ತಿಗೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು. ಇದನ್ನು ಆಚರಣೆ ಮಾಡಿದರೆ ಗ್ರಾಮಕ್ಕೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಜನರಲ್ಲಿದೆ.