<p><strong>ಚಾಮರಾಜನಗರ</strong>: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.</p>.<p>ಕಾರಾಗೃಹದ ಮಹಡಿಯಿಂದ ಕೆಳಗಡೆ ಬಿದ್ದು ಆತ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈಲಿನ ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ತಾಲ್ಲೂಕಿನ ಉತ್ತುವಳ್ಳಿ ಗ್ರಾಮದ ಮಂಜು ಮೃತಪಟ್ಟ ಕೈದಿ. ನಾಲ್ಕು ವರ್ಷಗಳ ಹಿಂದೆ ಪತ್ನಿಯನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಇದೇ 8ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.</p>.<p>'ಶಿಕ್ಷೆಯಾಗಿರುವುದಕ್ಕೆ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಾಣಿಸುತ್ತಿದೆ. ಬೆಳಿಗ್ಗೆ 7.15ರ ಸುಮಾರಿಗೆ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ. ಆದರೆ ಅಷ್ರರಲ್ಲಾಗಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು' ಎಂದು ಕಾರಾಗೃಹದ ಸೂಪರಿಂಟೆಂಡೆಂಡ್ ವಿಜಯ್ ರೋಡ್ಕರ್ ಅವರು 'ಪ್ರಜಾವಾಣಿ'ಗೆ ತಿಳಿಸಿದರು.</p>.<p>'ಸಾಮಾನ್ಯವಾಗಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದಿಲ್ಲ. ಮೈಸೂರಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದಲ್ಲಿ ಶಿಕ್ಷೆ ಘೋಷಣೆಯಾದ ದಿನವೇ, ಮೈಸೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಬೇಕಿತ್ತು. ಆದರೆ, ಚುನಾವಣೆ ಇದ್ದುದರಿಂದ ಪೊಲೀಸರು ಆ ಕರ್ತವ್ಯದಲ್ಲಿ ಇದ್ದರು. ಹೀಗಾಗಿ ಕರೆದುಕೊಂಡಲು ಆಗಿರಲಿಲ್ಲ' ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.</p>.<p>ಕಾರಾಗೃಹದ ಮಹಡಿಯಿಂದ ಕೆಳಗಡೆ ಬಿದ್ದು ಆತ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈಲಿನ ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ತಾಲ್ಲೂಕಿನ ಉತ್ತುವಳ್ಳಿ ಗ್ರಾಮದ ಮಂಜು ಮೃತಪಟ್ಟ ಕೈದಿ. ನಾಲ್ಕು ವರ್ಷಗಳ ಹಿಂದೆ ಪತ್ನಿಯನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಇದೇ 8ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.</p>.<p>'ಶಿಕ್ಷೆಯಾಗಿರುವುದಕ್ಕೆ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಾಣಿಸುತ್ತಿದೆ. ಬೆಳಿಗ್ಗೆ 7.15ರ ಸುಮಾರಿಗೆ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ. ಆದರೆ ಅಷ್ರರಲ್ಲಾಗಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು' ಎಂದು ಕಾರಾಗೃಹದ ಸೂಪರಿಂಟೆಂಡೆಂಡ್ ವಿಜಯ್ ರೋಡ್ಕರ್ ಅವರು 'ಪ್ರಜಾವಾಣಿ'ಗೆ ತಿಳಿಸಿದರು.</p>.<p>'ಸಾಮಾನ್ಯವಾಗಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದಿಲ್ಲ. ಮೈಸೂರಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದಲ್ಲಿ ಶಿಕ್ಷೆ ಘೋಷಣೆಯಾದ ದಿನವೇ, ಮೈಸೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಬೇಕಿತ್ತು. ಆದರೆ, ಚುನಾವಣೆ ಇದ್ದುದರಿಂದ ಪೊಲೀಸರು ಆ ಕರ್ತವ್ಯದಲ್ಲಿ ಇದ್ದರು. ಹೀಗಾಗಿ ಕರೆದುಕೊಂಡಲು ಆಗಿರಲಿಲ್ಲ' ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>