‘ಆಗಸ್ಟ್ 24ರಂದು ಮುಖ್ಯಮಂತ್ರಿ ಭೇಟಿ’
ಚಾಮರಾಜನಗರದಲ್ಲಿ ಆಗಸ್ಟ್ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನದ ಬಳಿಕ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಸಭೆ ನಡೆಯಲಿದೆ. ಬೆಟ್ಟಕ್ಕೆ ಮುಖ್ಯಮಂತ್ರಿ ಭೇಟಿ ನೀಡಲಿದ್ದು ಅಭಿವೃದ್ಧಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಬೇಕು. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಕರ್ಯ ಒದಗಿಸಬೇಕು. ಕುಡಿಯುವ ನೀರು ಶೌಚಾಲಯವನ್ನು ಅಚ್ಚುಕಟ್ಟಾಗಿ ಸ್ವಚ್ಛ ಆರೋಗ್ಯಪೂರ್ಣವಾಗಿ ನಿರ್ವಹಿಸುವ ವ್ಯವಸ್ಥೆ ಆಗಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಪ್ರಾಧಿಕಾರ ಕಾರ್ಯದರ್ಶಿ ರಘು ಅವರಿಗೆ ಸಲಹೆ ನೀಡಿದರು.