‘ಈ ಬಗ್ಗೆ ಸಮೀಕ್ಷೆ ಮಾಡಿಸುತ್ತಿದ್ದೇವೆ. ಸಚಿವ ಸಂಪುಟದ ಮುಂದೆ ಚರ್ಚೆಗೆ ಬಂದಿದೆ. ಇದು ಸೂಕ್ಷ್ಮ ವಿಚಾರ. ತಕ್ಷಣಕ್ಕೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಂತ ಹಂತವಾಗಿ ತೀರ್ಮಾನ ಮಾಡಬೇಕಾಗಿದೆ.ಈ ಅರಣ್ಯದಲ್ಲಿ 400–500 ವರ್ಷಗಳಿಂದಲೂ ಹೆಚ್ಚು ಸಮಯದಿಂದ ಇರುವ ಗ್ರಾಮಗಳಿವೆ. ಅವುಗಳನ್ನು ಏನು ಮಾಡುವುದು. ಅಲ್ಲಿನ ಜನರನ್ನು ಎಲ್ಲಿಗೆ ಕಳುಹಿಸುವುದು? ಹಾಗಾಗಿ, ಸದ್ಯಕ್ಕೆ ಯೋಜನೆಯನ್ನು ತಡೆ ಹಿಡಿಯಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.