<p><strong>ಚಾಮರಾಜನಗರ: </strong>ಪೌರತ್ವ (ತಿದ್ದುಪಡಿ) ಮಸೂದೆಯ ವಿರುದ್ಧ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರವು ಲೋಕಸಭೆಯಲ್ಲಿ ಮಂಡಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಯು ಮುಸ್ಲಿಮರ ವಿರುದ್ಧದ ಅಜೆಂಡಾ ಆಗಿದೆ ಎಂದು ಆರೋಪಿಸಿದರು.</p>.<p>ಬಾಂಗ್ಲಾ ನುಸುಳುಕೋರರ ಪತ್ತೆ ಹಚ್ಚುವ ನೆಪದಲ್ಲಿ ಇಲ್ಲಿಯೇ ಹುಟ್ಟಿ ಬೆಳೆದಿರುವ ಮುಸ್ಲಿಮರ ಪೌರತ್ವ ನಿಷೇಧಿಸುವ ದುಸ್ಸಾಹಸಕ್ಕೆ ಕೇಂದ್ರ ಸರ್ಕಾರ ಕೈಹಾಕಿದೆ ಎಂದರು.</p>.<p>ಇಂತಹ ಸಾಹಸ ನಿಲ್ಲಿಸಬೇಕು. ಅದರ ಬದಲು ಬಾಂಗ್ಲಾ ನುಸುಳುಕೋರರು ಇರುವಂತಹ ಜಿಲ್ಲೆಗಳಲ್ಲಿ ಸರ್ಕಾರದ ಇಲಾಖೆಗಳನ್ನು ಬಳಸಿಕೊಂಡು ಸಮೀಕ್ಷೆ ಮಾಡಿಸಿ ಕ್ರಮ ಕೈಗೊಳ್ಳಬಹುದಲ್ಲ.ನುಸುಳುಕೋರರನ್ನು ಪತ್ತೆ ಹಚ್ಚಲಾಗದೆ ನಮ್ಮ ಪೌರತ್ವ ಕೇಳಲು ಬಂದರೆ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಎಚ್ಚರಿಸಿದರು.</p>.<p>ಬಾಂಗ್ಲಾ ದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕೊಡುವುದಾಗಿ ಹೇಳಿರುವ ಸರ್ಕಾರದ ಹೇಳಿಕೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಮುಸ್ಲಿಮರನ್ನೇ ಟಾರ್ಗೆಟ್ ಮಾಡಲಾಗಿದೆ. ಈ ಬಗ್ಗೆ ಜನರು ಜಾಗೃತರಾಗಬೇಕು ಎಂದುಸಲಹೆನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಪೌರತ್ವ (ತಿದ್ದುಪಡಿ) ಮಸೂದೆಯ ವಿರುದ್ಧ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರವು ಲೋಕಸಭೆಯಲ್ಲಿ ಮಂಡಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಯು ಮುಸ್ಲಿಮರ ವಿರುದ್ಧದ ಅಜೆಂಡಾ ಆಗಿದೆ ಎಂದು ಆರೋಪಿಸಿದರು.</p>.<p>ಬಾಂಗ್ಲಾ ನುಸುಳುಕೋರರ ಪತ್ತೆ ಹಚ್ಚುವ ನೆಪದಲ್ಲಿ ಇಲ್ಲಿಯೇ ಹುಟ್ಟಿ ಬೆಳೆದಿರುವ ಮುಸ್ಲಿಮರ ಪೌರತ್ವ ನಿಷೇಧಿಸುವ ದುಸ್ಸಾಹಸಕ್ಕೆ ಕೇಂದ್ರ ಸರ್ಕಾರ ಕೈಹಾಕಿದೆ ಎಂದರು.</p>.<p>ಇಂತಹ ಸಾಹಸ ನಿಲ್ಲಿಸಬೇಕು. ಅದರ ಬದಲು ಬಾಂಗ್ಲಾ ನುಸುಳುಕೋರರು ಇರುವಂತಹ ಜಿಲ್ಲೆಗಳಲ್ಲಿ ಸರ್ಕಾರದ ಇಲಾಖೆಗಳನ್ನು ಬಳಸಿಕೊಂಡು ಸಮೀಕ್ಷೆ ಮಾಡಿಸಿ ಕ್ರಮ ಕೈಗೊಳ್ಳಬಹುದಲ್ಲ.ನುಸುಳುಕೋರರನ್ನು ಪತ್ತೆ ಹಚ್ಚಲಾಗದೆ ನಮ್ಮ ಪೌರತ್ವ ಕೇಳಲು ಬಂದರೆ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಎಚ್ಚರಿಸಿದರು.</p>.<p>ಬಾಂಗ್ಲಾ ದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕೊಡುವುದಾಗಿ ಹೇಳಿರುವ ಸರ್ಕಾರದ ಹೇಳಿಕೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಮುಸ್ಲಿಮರನ್ನೇ ಟಾರ್ಗೆಟ್ ಮಾಡಲಾಗಿದೆ. ಈ ಬಗ್ಗೆ ಜನರು ಜಾಗೃತರಾಗಬೇಕು ಎಂದುಸಲಹೆನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>