<p><strong>ಚಾಮರಾಜನಗರ:</strong> ತಾಲ್ಲೂಕಿನ ಅಟ್ಟುಗೂಳಿಪುರ ಟೋಲ್ನಲ್ಲಿ ಸ್ಥಳೀಯರಿಂದ ಶುಲ್ಕ ವಸೂಲಿ ಮಾಡುತ್ತಿರುವ ಕ್ರಮ ಖಂಡಿಸಿ ಗೂಡ್ಸ್ ಆಟೊ ಮಾಲೀಕರು, ಚಾಲಕರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖರ ಮಾತನಾಡಿ, ಅಟ್ಟುಗೂಳಿಪುರ ಟೋಲ್ ಮಾರ್ಗವಾಗಿ ಸ್ಥಳೀಯ ರೈತರು, ಕಾರ್ಮಿಕರು, ಗೂಡ್ಸ್ ಆಟೊ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಾರೆ. ಸ್ಥಳೀಯರಿಂದ ಟೋಲ್ ಪಡೆಯುವುದು ಸರಿಯಲ್ಲ ಎಂದರು. </p>.<p>ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಿ ಸ್ಥಳೀಯರಿಂದ ಟೋಲ್ ವಸೂಲಿಗೆ ಬ್ರೇಕ್ ಹಾಕಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಕೆಸ್ತೂರು ಮರಪ್ಪ, ಕನ್ನಹಳ್ಳಿ ಸೋಮಣ್ಣ, ಅಟೊ ಚಾಲಕರಾದ ವಿನೋದ್ ಕುಮಾರ್, ಲೋಹಿತ್, ರವಿ, ಜಗದೀಶ್, ಚಂದನ್, ಮಹೇಶ್, ಸಿದ್ದು, ಮಹೇಂದ್ರ, ರಮಿಜ್ ರಮೇಶ್, ವಿಶಾಲ್, ಮಹೇಶ್ ,ವಿಕ್ರಂ, ಆಕಾಶ್ ,ಲಿಂಗಪ್ಪ, ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಅಟ್ಟುಗೂಳಿಪುರ ಟೋಲ್ನಲ್ಲಿ ಸ್ಥಳೀಯರಿಂದ ಶುಲ್ಕ ವಸೂಲಿ ಮಾಡುತ್ತಿರುವ ಕ್ರಮ ಖಂಡಿಸಿ ಗೂಡ್ಸ್ ಆಟೊ ಮಾಲೀಕರು, ಚಾಲಕರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖರ ಮಾತನಾಡಿ, ಅಟ್ಟುಗೂಳಿಪುರ ಟೋಲ್ ಮಾರ್ಗವಾಗಿ ಸ್ಥಳೀಯ ರೈತರು, ಕಾರ್ಮಿಕರು, ಗೂಡ್ಸ್ ಆಟೊ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಾರೆ. ಸ್ಥಳೀಯರಿಂದ ಟೋಲ್ ಪಡೆಯುವುದು ಸರಿಯಲ್ಲ ಎಂದರು. </p>.<p>ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಿ ಸ್ಥಳೀಯರಿಂದ ಟೋಲ್ ವಸೂಲಿಗೆ ಬ್ರೇಕ್ ಹಾಕಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಕೆಸ್ತೂರು ಮರಪ್ಪ, ಕನ್ನಹಳ್ಳಿ ಸೋಮಣ್ಣ, ಅಟೊ ಚಾಲಕರಾದ ವಿನೋದ್ ಕುಮಾರ್, ಲೋಹಿತ್, ರವಿ, ಜಗದೀಶ್, ಚಂದನ್, ಮಹೇಶ್, ಸಿದ್ದು, ಮಹೇಂದ್ರ, ರಮಿಜ್ ರಮೇಶ್, ವಿಶಾಲ್, ಮಹೇಶ್ ,ವಿಕ್ರಂ, ಆಕಾಶ್ ,ಲಿಂಗಪ್ಪ, ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>