ಚಾಮರಾಜನಗರ: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಜರುಗಿಸಬೇಕು ಎಂದುಒತ್ತಾಯಿಸಿ ಓಡಿಪಿ ಸಂಸ್ಥೆಯ ಮಹಿಳೋದಯ ಮಹಿಳಾ ಒಕ್ಕೂಟದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರದೇವಸ್ಥಾನದಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಮೂಲಕಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಮಾರ್ಗವಾಗಿಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸದೆ ಇರುವುದು ಶೋಚನೀಯ. ದೇಶದಾದ್ಯಂತ ಮಹಿಳೆಯರುಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಘೋರ ಕೃತ್ಯಗಳು ಇಡೀ ಮಾನವ ಕುಲವನ್ನೇ ತಲ್ಲಣಗೊಳಿಸುತ್ತಿವೆ. ನಿರ್ಭಯಾದುರಂತ ಪ್ರಕರಣದ ನಂತರ ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ಕೊಲೆಯಂತಹ ಕ್ರೌರ್ಯಗಳು ನಡೆಯುತ್ತಿದ್ದರೂ ಸರ್ಕಾರ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಹತ್ಯೆ ಪ್ರಕರಣ ಹೆಣ್ಣುಮಕ್ಕಳಿಗೆ ಭಯ ಹುಟ್ಟಿಸಿತ್ತು. ಈಗ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನಿಟ್ಟುಸಿರುಬಿಟ್ಟಂತಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರ ರಕ್ಷಣೆಗಾಗಿ ಮಹಿಳೆಯರ ಪರ ಸರ್ಕಾರ ರಕ್ಷಣಾ ನೀತಿಗಳನ್ನು ಜಾರಿಗೆ ತರಬೇಕು. ಕ್ರೂರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅತ್ಯಾಚಾರಿಗಳಿಗೆ ಸಾರ್ವಜನಿಕ ವಲಯದಲ್ಲಿಯೇ ಘೋರ ಶಿಕ್ಷೆ ನೀಡಿ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ನೀಲಾ, ಶಾಂತಲಕ್ಷ್ಮೀ, ಮೀನಾಕ್ಷಿ, ಚಂದ್ರಮ್ಮ, ವಲಯ ಸಂಯೋಜಕ ಸಿದ್ದರಾಜ್, ಲತಾ, ಪುಷ್ಷಲತಾ, ಮೇರಿಗ್ರೆಸಿ, ರೇಖಾ, ಸರೋಜ, ಹಂಸವೇಣಿ, ಲಕ್ಷ್ಮಿ, ಪ್ರೇಮ, ಅನಿತಾ, ರವಿ, ರವಿಕುಮಾರ್, ಮೇರಿ ಜೋಸೆಫ್, ಕುಮಾರ್, ಸಿ.ಎಸ್.ನಾಗರಾಜು, ಪ್ರಕಾಶ್, ಸಾಗರ್ ಭಾಗವಹಿಸಿದ್ದರು.