<p><strong>ಚಾಮರಾಜನಗರ: </strong>ಮರಾಠ ಅಭಿವೃದ್ದಿ ಪ್ರಾಧಿಕಾರ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಪದಾಧಿಕಾರಿಗಳು ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಗೊಳಿಸಿ ಎಂದು ಘೋಷಣೆ ಕೂಗಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು, ‘ರಾಜ್ಯದಲ್ಲಿರುವುದು ಕನ್ನಡ ವಿರೋಧಿ ಸರ್ಕಾರ. ಕನ್ನಡ ವಿರೋಧಿ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾರೆ. ಏಳು ಕೋಟಿ ಕನ್ನಡಿಗರ ಭಾವನೆಗೆ ಧಕ್ಕೆ ಮಾಡಿ ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ರಚಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಜನವರಿ 9ರಂದು ರಾಜ್ಯದಾದ್ಯಂತ ರೈಲ್ವೆ ಬಂದ್ ಚಳವಳಿಗೆ ವಾಟಾಳ್ ನಾಗರಾಜು ಅವರು ಕರೆ ಕೊಟ್ಟಿದ್ದರು. ಆದರೆ ಆ ಕಾರ್ಯಕ್ರಮವನ್ನು ಜ30 ಕ್ಕೆ ಮುಂದೂಡಲಾಗಿದೆ. ರಾಜ್ಯ ಸರ್ಕಾರದ ಕನ್ನಡ ವಿರೋಧಿ ನೀತಿ ಖಂಡಿಸಿ, ಕೇಂದ್ರದ ಗಮನ ಸೆಳೆಯುವ ಸಲುವಾಗಿ ಸಾಂಕೇತಿಕವಾಗಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ’ ಎಂದರು.</p>.<p>ಇದುವರೆಗೆ ಕನ್ನಡ ವಿರೋಧಿ ನೀತಿ ಅನುಸರಿಸಿದ ಎಲ್ಲ ಸರ್ಕಾರಗಳು ಅವನತಿ ಕಂಡಿವೆ. ಸರ್ಕಾರ ತಕ್ಷಣವೇ ಮರಾಟ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ನಿತ್ಯ ನಿರಂತರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p class="Subhead">ರೈಲ್ವೆ ದರ ಹೆಚ್ಚಳ ಖಂಡನೆ: ಚಾಮರಾಜನಗರದಿಂದ ಮೈಸೂರಿಗೆ ಹೋಗುವ ತಿರುಪತಿ ಎಕ್ಸ್ಪ್ರೆಸ್ ರೈಲಿನ ಪ್ರಯಾಣ ದರವನ್ನು ಕೋವಿಡ್ ಸಮಯದಲ್ಲಿ ದುಪ್ಪಟ್ಟು ಹೆಚ್ಚಳ ಮಾಡಿರುವುದು ಖಂಡಿನೀಯ. ಇದರಿಂದ ಬಡವರಿಗೆ ಹೊರೆಯಾಗಿದೆ. ಕೂಡಲೇ ಪ್ರಯಾಣ ದರವನ್ನು ಕಡಿಮೆಮಾಡಬೇಕು’ ಎಂದು ಪ್ರತಿಭನಕಾರರು ಒತ್ತಾಯಿಸಿದರು.</p>.<p>ನಿಜಧ್ವನಿಗೋವಿಂದರಾಜು, ಕಂಡಕ್ಟರ್ ಚಾ.ಸಿ.ಸೋಮನಾಯಕ, ಗು.ಪುರುಷೋತ್ತಮ್, ಪಣ್ಯದಹುಂಡಿರಾಜು, ಚಾ.ರಾ.ಕುಮಾರ್, ನಂಜುಂಡ, ತಾಂಡವಮೂರ್ತಿ, ದೊರೆ, ಶಿವಶಂಕರನಾಯಕ, ಲಿಂಗರಾಜು, ಚಾ.ಸಿ.ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಮರಾಠ ಅಭಿವೃದ್ದಿ ಪ್ರಾಧಿಕಾರ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಪದಾಧಿಕಾರಿಗಳು ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಗೊಳಿಸಿ ಎಂದು ಘೋಷಣೆ ಕೂಗಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು, ‘ರಾಜ್ಯದಲ್ಲಿರುವುದು ಕನ್ನಡ ವಿರೋಧಿ ಸರ್ಕಾರ. ಕನ್ನಡ ವಿರೋಧಿ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾರೆ. ಏಳು ಕೋಟಿ ಕನ್ನಡಿಗರ ಭಾವನೆಗೆ ಧಕ್ಕೆ ಮಾಡಿ ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ರಚಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಜನವರಿ 9ರಂದು ರಾಜ್ಯದಾದ್ಯಂತ ರೈಲ್ವೆ ಬಂದ್ ಚಳವಳಿಗೆ ವಾಟಾಳ್ ನಾಗರಾಜು ಅವರು ಕರೆ ಕೊಟ್ಟಿದ್ದರು. ಆದರೆ ಆ ಕಾರ್ಯಕ್ರಮವನ್ನು ಜ30 ಕ್ಕೆ ಮುಂದೂಡಲಾಗಿದೆ. ರಾಜ್ಯ ಸರ್ಕಾರದ ಕನ್ನಡ ವಿರೋಧಿ ನೀತಿ ಖಂಡಿಸಿ, ಕೇಂದ್ರದ ಗಮನ ಸೆಳೆಯುವ ಸಲುವಾಗಿ ಸಾಂಕೇತಿಕವಾಗಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ’ ಎಂದರು.</p>.<p>ಇದುವರೆಗೆ ಕನ್ನಡ ವಿರೋಧಿ ನೀತಿ ಅನುಸರಿಸಿದ ಎಲ್ಲ ಸರ್ಕಾರಗಳು ಅವನತಿ ಕಂಡಿವೆ. ಸರ್ಕಾರ ತಕ್ಷಣವೇ ಮರಾಟ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ನಿತ್ಯ ನಿರಂತರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p class="Subhead">ರೈಲ್ವೆ ದರ ಹೆಚ್ಚಳ ಖಂಡನೆ: ಚಾಮರಾಜನಗರದಿಂದ ಮೈಸೂರಿಗೆ ಹೋಗುವ ತಿರುಪತಿ ಎಕ್ಸ್ಪ್ರೆಸ್ ರೈಲಿನ ಪ್ರಯಾಣ ದರವನ್ನು ಕೋವಿಡ್ ಸಮಯದಲ್ಲಿ ದುಪ್ಪಟ್ಟು ಹೆಚ್ಚಳ ಮಾಡಿರುವುದು ಖಂಡಿನೀಯ. ಇದರಿಂದ ಬಡವರಿಗೆ ಹೊರೆಯಾಗಿದೆ. ಕೂಡಲೇ ಪ್ರಯಾಣ ದರವನ್ನು ಕಡಿಮೆಮಾಡಬೇಕು’ ಎಂದು ಪ್ರತಿಭನಕಾರರು ಒತ್ತಾಯಿಸಿದರು.</p>.<p>ನಿಜಧ್ವನಿಗೋವಿಂದರಾಜು, ಕಂಡಕ್ಟರ್ ಚಾ.ಸಿ.ಸೋಮನಾಯಕ, ಗು.ಪುರುಷೋತ್ತಮ್, ಪಣ್ಯದಹುಂಡಿರಾಜು, ಚಾ.ರಾ.ಕುಮಾರ್, ನಂಜುಂಡ, ತಾಂಡವಮೂರ್ತಿ, ದೊರೆ, ಶಿವಶಂಕರನಾಯಕ, ಲಿಂಗರಾಜು, ಚಾ.ಸಿ.ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>