<p>ಚಾಮರಾಜನಗರ: ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ, ದಲಿತ ಸಂಘರ್ಷ ಸಮಿತಿಯ (ಡಿ.ಜಿ.ಸಾಗರ್ ಬಣ) ಪದಾಧಿಕಾರಿಗಳು, ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಕೇಂದ್ರ–ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.</p>.<p>ದಸಂಸ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ‘ಅಂತರರಾಷ್ಟ್ರೀಯ ಕಚ್ಚಾತೈಲದ ಬೆಲೆ ಬ್ಯಾರಲ್ಗೆ 100 ಡಾಲರ್ ಇದ್ದಾಗ, ಪೆಟ್ರೋಲ್ ದರ ಲೀಟರ್ಗೆ ₹ 72 ಇತ್ತು. ಕಚ್ಚಾ ತೈಲದ ಬೆಲೆ ಈಗ ಕುಸಿದಿದೆ. ಹಾಗಿದ್ದರೂ ಪೆಟ್ರೋಲ್ ಬೆಲೆ ಶತಕ ದಾಟಿದ್ದು, ಡೀಸೆಲ್ ಬೆಲೆಯೂ ಶತಕದ ಆಸುಪಾಸಿನಲ್ಲಿದೆ. ಇದರ ಜೊತೆಗೆ ಇತರ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಿ ಜನ ಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಅಡುಗೆ ಅನಿಲ ಬೆಲೆ ಸಿಲಿಂಡರ್ಗೆ ₹ 1000 ತಲುಪಿದ್ದು, ಮಹಿಳೆಯರು ಅಡುಗೆ ಅನಿಲದ ಬದಲಿಗೆ ಮತ್ತೆ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಲು ಆರಂಭಿಸಿದ್ದಾರೆ. ಜನರ ಹಿತ ಕಾಪಾಡಬೇಕಾದ ಸರ್ಕಾರ ಜನರನ್ನು ಸಂಕಷ್ಟದ ಸುಳಿಯಲ್ಲಿ ಸಿಲುಕಿಸಲು ಮುಂದಾಗಿದೆ’ ಎಂದರು.</p>.<p>ಕೇಂದ್ರ ಸರ್ಕಾರ ಕೂಡಲೇ ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.</p>.<p>ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜು, ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು, ಉಮೇಶ್ ಕುಮಾರ್, ಆಟೊ ಉಮೇಶ್, ಬಂಗಾರಸ್ವಾಮಿ, ನಾಗರಾಜು, ಪ್ರದೀಪ್, ಮಂಜೇಶ್, ಮಹದೇವಸ್ವಾಮಿ, ಸಿದ್ದರಾಮಯ್ಯ, ಸುಂದರ್, ಚಾ.ಸಿ.ಸಿದ್ದರಾಜು, ಮಲ್ಲಿಕಾರ್ಜುನ್, ಶೇಖರ್, ಶಿವು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ, ದಲಿತ ಸಂಘರ್ಷ ಸಮಿತಿಯ (ಡಿ.ಜಿ.ಸಾಗರ್ ಬಣ) ಪದಾಧಿಕಾರಿಗಳು, ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಕೇಂದ್ರ–ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.</p>.<p>ದಸಂಸ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ‘ಅಂತರರಾಷ್ಟ್ರೀಯ ಕಚ್ಚಾತೈಲದ ಬೆಲೆ ಬ್ಯಾರಲ್ಗೆ 100 ಡಾಲರ್ ಇದ್ದಾಗ, ಪೆಟ್ರೋಲ್ ದರ ಲೀಟರ್ಗೆ ₹ 72 ಇತ್ತು. ಕಚ್ಚಾ ತೈಲದ ಬೆಲೆ ಈಗ ಕುಸಿದಿದೆ. ಹಾಗಿದ್ದರೂ ಪೆಟ್ರೋಲ್ ಬೆಲೆ ಶತಕ ದಾಟಿದ್ದು, ಡೀಸೆಲ್ ಬೆಲೆಯೂ ಶತಕದ ಆಸುಪಾಸಿನಲ್ಲಿದೆ. ಇದರ ಜೊತೆಗೆ ಇತರ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಿ ಜನ ಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಅಡುಗೆ ಅನಿಲ ಬೆಲೆ ಸಿಲಿಂಡರ್ಗೆ ₹ 1000 ತಲುಪಿದ್ದು, ಮಹಿಳೆಯರು ಅಡುಗೆ ಅನಿಲದ ಬದಲಿಗೆ ಮತ್ತೆ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಲು ಆರಂಭಿಸಿದ್ದಾರೆ. ಜನರ ಹಿತ ಕಾಪಾಡಬೇಕಾದ ಸರ್ಕಾರ ಜನರನ್ನು ಸಂಕಷ್ಟದ ಸುಳಿಯಲ್ಲಿ ಸಿಲುಕಿಸಲು ಮುಂದಾಗಿದೆ’ ಎಂದರು.</p>.<p>ಕೇಂದ್ರ ಸರ್ಕಾರ ಕೂಡಲೇ ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.</p>.<p>ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜು, ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು, ಉಮೇಶ್ ಕುಮಾರ್, ಆಟೊ ಉಮೇಶ್, ಬಂಗಾರಸ್ವಾಮಿ, ನಾಗರಾಜು, ಪ್ರದೀಪ್, ಮಂಜೇಶ್, ಮಹದೇವಸ್ವಾಮಿ, ಸಿದ್ದರಾಮಯ್ಯ, ಸುಂದರ್, ಚಾ.ಸಿ.ಸಿದ್ದರಾಜು, ಮಲ್ಲಿಕಾರ್ಜುನ್, ಶೇಖರ್, ಶಿವು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>