<p><strong>ಚಾಮರಾಜನಗರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಖಾಲಿ ರಟ್ಟಿನ ಪೆಟ್ಟಿಗೆ ಪ್ರದರ್ಶಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. </p>.<p>ಭುವನೇಶ್ವರಿ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ವಾಹನಗಳ ಸಂಚಾರ ತಡೆದರು. ರಟ್ಟಿನ ಖಾಲಿ ಪೆಟ್ಟಿಗೆಗಳನ್ನು ಪ್ರದರ್ಶಿಸಿ, ‘ಜಿಲ್ಲೆಯ ಪಾಲಿಗೆ ಬಜೆಟ್ ಖಾಲಿ ಡಬ್ಬ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. </p>.<p>ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ ‘ನಗರದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿ ಜಿಲ್ಲೆಯ ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಆದರೆ, ಸರ್ಕಾರ ಅವುಗಳನ್ನು ಪರಿಗಣಿಸಿಲ್ಲ’ ಎಂದು ಆರೋಪಿಸಿದರು. </p>.<p>‘ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುದಾನ ಮೀಸಲಿಡಬೇಕು, ಚಾಮರಾಜನಗರಕ್ಕೆ 2ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೆ ತರಬೇಕು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು ಹಾಗೂ ವಿಶ್ವವಿದ್ಯಾಲಯ ಪುನಶ್ಚೇತನಕ್ಕೆ ₹1,000 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದೆವು. ಆದರೆ ಯಾವ ಬೇಡಿಕೆಗೂ ಸರ್ಕಾರ ಸ್ಪಂದಿಸಿಲ್ಲ. ಜಿಲ್ಲೆಗೆ ಅನ್ಯಾಯ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ಲಿಂಗರಾಜು, ನಿಜಧ್ವನಿ ಗೋವಿಂದರಾಜ್, ಚಾ.ವೆಂ.ರಾಜ್ಗೋಪಾಲ್, ಚಾ.ರ.ಕುಮಾರ್, ಆಟೊ ನಾಗೇಶ್, ವೀರಭದ್ರ, ಮಹೇಶ್ಗೌಡ, ರವಿಚಂದ್ರ ಪ್ರಸಾದ್ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಖಾಲಿ ರಟ್ಟಿನ ಪೆಟ್ಟಿಗೆ ಪ್ರದರ್ಶಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. </p>.<p>ಭುವನೇಶ್ವರಿ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ವಾಹನಗಳ ಸಂಚಾರ ತಡೆದರು. ರಟ್ಟಿನ ಖಾಲಿ ಪೆಟ್ಟಿಗೆಗಳನ್ನು ಪ್ರದರ್ಶಿಸಿ, ‘ಜಿಲ್ಲೆಯ ಪಾಲಿಗೆ ಬಜೆಟ್ ಖಾಲಿ ಡಬ್ಬ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. </p>.<p>ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ ‘ನಗರದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿ ಜಿಲ್ಲೆಯ ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಆದರೆ, ಸರ್ಕಾರ ಅವುಗಳನ್ನು ಪರಿಗಣಿಸಿಲ್ಲ’ ಎಂದು ಆರೋಪಿಸಿದರು. </p>.<p>‘ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುದಾನ ಮೀಸಲಿಡಬೇಕು, ಚಾಮರಾಜನಗರಕ್ಕೆ 2ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೆ ತರಬೇಕು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು ಹಾಗೂ ವಿಶ್ವವಿದ್ಯಾಲಯ ಪುನಶ್ಚೇತನಕ್ಕೆ ₹1,000 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದೆವು. ಆದರೆ ಯಾವ ಬೇಡಿಕೆಗೂ ಸರ್ಕಾರ ಸ್ಪಂದಿಸಿಲ್ಲ. ಜಿಲ್ಲೆಗೆ ಅನ್ಯಾಯ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ಲಿಂಗರಾಜು, ನಿಜಧ್ವನಿ ಗೋವಿಂದರಾಜ್, ಚಾ.ವೆಂ.ರಾಜ್ಗೋಪಾಲ್, ಚಾ.ರ.ಕುಮಾರ್, ಆಟೊ ನಾಗೇಶ್, ವೀರಭದ್ರ, ಮಹೇಶ್ಗೌಡ, ರವಿಚಂದ್ರ ಪ್ರಸಾದ್ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>