<p><strong>ಚಾಮರಾಜನಗರ:</strong> ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸೇರಿದ ಪ್ರತಿಭಟನಕಾರರು ಉದ್ಧವ್ ಠಾಕ್ರೆ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>‘ಕರ್ನಾಟಕದಲ್ಲಿರುವ ಮರಾಠಿ ಭಾಷೆ ಹಾಗೂ ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯ ವಿಭಜನೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ರಾಜ್ಯದಲ್ಲಿರುವ ಮರಾಠಿಗರು ಕನ್ನಡಿಗರೊಂದಿಗೆ ಅನ್ಯೋನ್ಯತೆಯಿಂದ ಬೆರೆತು ಜೀವನ ನಡೆಸುತ್ತಿದ್ದಾರೆ’ ಎಂದರು.</p>.<p>ರಾಜ್ಯದಲ್ಲಿರುವ ಯಾರಾದರೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಹೇಳಿದರೆ, ಅಂತಹವರನ್ನು ನಾವೇ ಮಹಾರಾಷ್ಟ್ರಕ್ಕೆ ಕಳುಹಿಸಿಕೊಡುತ್ತೇವೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಠಾಕ್ರೆ ಹೇಳಿಕೆಯನ್ನು ಖಂಡಿಸಬೇಕು. ಅವರು ಕ್ಷಮೆ ಕೇಳುವಂತೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದರು.</p>.<p>ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥಚಾರಿ, ಪದಾಧಿಕಾರಿಗಳಾದ ರಂಗಸ್ವಾಮಿ, ವೆಂಕಟೇಶ್, ಗಿರೀಶ್ ಚಾರಿ, ವೀರಭದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸೇರಿದ ಪ್ರತಿಭಟನಕಾರರು ಉದ್ಧವ್ ಠಾಕ್ರೆ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>‘ಕರ್ನಾಟಕದಲ್ಲಿರುವ ಮರಾಠಿ ಭಾಷೆ ಹಾಗೂ ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯ ವಿಭಜನೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ರಾಜ್ಯದಲ್ಲಿರುವ ಮರಾಠಿಗರು ಕನ್ನಡಿಗರೊಂದಿಗೆ ಅನ್ಯೋನ್ಯತೆಯಿಂದ ಬೆರೆತು ಜೀವನ ನಡೆಸುತ್ತಿದ್ದಾರೆ’ ಎಂದರು.</p>.<p>ರಾಜ್ಯದಲ್ಲಿರುವ ಯಾರಾದರೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಹೇಳಿದರೆ, ಅಂತಹವರನ್ನು ನಾವೇ ಮಹಾರಾಷ್ಟ್ರಕ್ಕೆ ಕಳುಹಿಸಿಕೊಡುತ್ತೇವೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಠಾಕ್ರೆ ಹೇಳಿಕೆಯನ್ನು ಖಂಡಿಸಬೇಕು. ಅವರು ಕ್ಷಮೆ ಕೇಳುವಂತೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದರು.</p>.<p>ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥಚಾರಿ, ಪದಾಧಿಕಾರಿಗಳಾದ ರಂಗಸ್ವಾಮಿ, ವೆಂಕಟೇಶ್, ಗಿರೀಶ್ ಚಾರಿ, ವೀರಭದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>