ರಾಜ್ಯದಲ್ಲಿರುವ ಯಾರಾದರೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಹೇಳಿದರೆ, ಅಂತಹವರನ್ನು ನಾವೇ ಮಹಾರಾಷ್ಟ್ರಕ್ಕೆ ಕಳುಹಿಸಿಕೊಡುತ್ತೇವೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಠಾಕ್ರೆ ಹೇಳಿಕೆಯನ್ನು ಖಂಡಿಸಬೇಕು. ಅವರು ಕ್ಷಮೆ ಕೇಳುವಂತೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದರು.