<p><strong>ಚಾಮರಾಜನಗರ: </strong>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಕಾಯಂ ಉಪನ್ಯಾಸಕರನ್ನು ನೇಮಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಸಂಘದ (ಬಿವಿಎಸ್) ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿರಸ್ತೇದಾರ ಕುಮಾರ್ ಅವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.</p>.<p>‘ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 250 ವಿದ್ಯಾರ್ಥಿಗಳಿದ್ದಾರೆ. ಎಲ್ಲ ಕಡೆಗಳಲ್ಲೂ 2020 ರ ನವೆಂಬರ್ 17 ರಿಂದ ಆನ್ಲೈನ್ನಲ್ಲಿ ತರಗತಿಗಳು ಪ್ರಾರಂಭವಾಗಿವೆ. ಇಲ್ಲಿನ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ನಡೆಯುತ್ತಿಲ್ಲ. ಕಾಯಂ ಉಪನ್ಯಾಸಕರ ಕೊರತೆ ಇದ್ದು, ಈ ವರ್ಷ ಅತಿಥಿ ಉಪನ್ಯಾಸಕರು ಕೂಡ ಬರುತ್ತಿಲ್ಲ. ಪಾಠ ನಡೆಯದೇ ಇರುವುದರಿಂದ ಮುಂದಿನ ಪರೀಕ್ಷೆಗೆ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಕೂಡಲೇ ಕಾಯಂ ಉಪನ್ಯಾಸಕರನ್ನು ನಿಯೋಜನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ಸಂಚಾಲಕ ಪರ್ವತರಾಜ್,ಎಸ್.ಭರತ್, ಕಾರ್ತಿಕ್, ವಿಶ್ವಾಸ್, ಸಂತೋಷ್, ಮನೋಜ್, ಭಾಗ್ಯ, ಅಶ್ರಿತಾ, ಕವಿತಾ, ಪುಷ್ಷಲತಾ, ಲಕ್ಷ್ಮಿ, ಅಂಜಲಿ, ಸೌಮ್ಯ, ಆಶಾ, ರಶ್ಮಿತಾ, ನವೀನ, ರಾಜೇಶ್, ರಾಮು, ಮಹೇಶ್, ಮಲ್ಲಿಕಾರ್ಜುನ, ಸಂತೋಷ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಕಾಯಂ ಉಪನ್ಯಾಸಕರನ್ನು ನೇಮಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಸಂಘದ (ಬಿವಿಎಸ್) ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿರಸ್ತೇದಾರ ಕುಮಾರ್ ಅವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.</p>.<p>‘ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 250 ವಿದ್ಯಾರ್ಥಿಗಳಿದ್ದಾರೆ. ಎಲ್ಲ ಕಡೆಗಳಲ್ಲೂ 2020 ರ ನವೆಂಬರ್ 17 ರಿಂದ ಆನ್ಲೈನ್ನಲ್ಲಿ ತರಗತಿಗಳು ಪ್ರಾರಂಭವಾಗಿವೆ. ಇಲ್ಲಿನ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ನಡೆಯುತ್ತಿಲ್ಲ. ಕಾಯಂ ಉಪನ್ಯಾಸಕರ ಕೊರತೆ ಇದ್ದು, ಈ ವರ್ಷ ಅತಿಥಿ ಉಪನ್ಯಾಸಕರು ಕೂಡ ಬರುತ್ತಿಲ್ಲ. ಪಾಠ ನಡೆಯದೇ ಇರುವುದರಿಂದ ಮುಂದಿನ ಪರೀಕ್ಷೆಗೆ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಕೂಡಲೇ ಕಾಯಂ ಉಪನ್ಯಾಸಕರನ್ನು ನಿಯೋಜನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ಸಂಚಾಲಕ ಪರ್ವತರಾಜ್,ಎಸ್.ಭರತ್, ಕಾರ್ತಿಕ್, ವಿಶ್ವಾಸ್, ಸಂತೋಷ್, ಮನೋಜ್, ಭಾಗ್ಯ, ಅಶ್ರಿತಾ, ಕವಿತಾ, ಪುಷ್ಷಲತಾ, ಲಕ್ಷ್ಮಿ, ಅಂಜಲಿ, ಸೌಮ್ಯ, ಆಶಾ, ರಶ್ಮಿತಾ, ನವೀನ, ರಾಜೇಶ್, ರಾಮು, ಮಹೇಶ್, ಮಲ್ಲಿಕಾರ್ಜುನ, ಸಂತೋಷ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>