‘ಚಾಮರಾಜನಗರದಲ್ಲಿರುವ ಹುಡುಗರ ಹಾಸ್ಟೆಲ್ನಲ್ಲಿ ಒಂದು ತಿಂಗಳಿಂದ ಆಹಾರ ಕೊಡುತ್ತಿಲ್ಲ. ಇದರಿಂದ ತುಂಬಾ ತೊಂದರೆಯಾಗಿದ್ದು, ತಿಂಡಿ, ಊಟಕ್ಕಾಗಿ ಹೋಟೆಲ್ಗಳಿಗೆ ಹೋಗಬೇಕಾಗಿದೆ. ವಿದ್ಯಾರ್ಥಿನಿಯರಿಗೆ ಜೆಎಸ್ಎಸ್ ಕಾಲೇಜಿನ ಹಾಸ್ಟೆಲ್ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಹಾಸ್ಟೆಲ್ನಲ್ಲಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಇನ್ನೂ ಸ್ಕಾಲರ್ ಶಿಪ್ ಬಂದಿಲ್ಲ. ₹10 ಸಾವಿರ ಶುಲ್ಕ ಕಟ್ಟುವಂತೆ ಹೇಳುತ್ತಾರೆ. ಕಾಲೇಜಿಗೆ ಬರುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ಅಷ್ಟು ಹಣ ಕಟ್ಟಲು ಆಗುತ್ತಿಲ್ಲ’ ಎಂದು ದೂರಿದರು.