ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಇಡೀ ದೇಶ ಕೋವಿಡ್ನಿಂದ ತತ್ತರಿಸಿ ಹೋಗಿದೆ. ಮೂರನೇ ಅಲೆ ಬರಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಝಿಂಕಾ ವೈರಸ್ ಪತ್ತೆಯಾಗಿದೆ. ಅದಲ್ಲದೇ, ಪ್ರತಿನಿತ್ಯ 15 ಸಾವಿರ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಈಗ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ. ಇಂತಹ ಸಂದರ್ಭದಲ್ಲಿ ಕೇರಳದಿಂದ ಯಾವುದೇ ವಾಹನಗಳು, ಜನರನ್ನು ಜಿಲ್ಲೆ ಪ್ರವೇಶಿಸಲು ಬಿಡಬಾರದು’ ಎಂದು ಆಗ್ರಹಿಸಿದರು.