<p><strong>ಚಾಮರಾಜನಗರ</strong>: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.</p>.<p>ನಗರದ ಜೋಡಿ ರಸ್ತೆಯ ಜಿಲ್ಲಾಡಳಿತ ಗೇಟಿನ ಮುಂಭಾಗ ಸೇರಿದ ಪ್ರತಿಭಟನಕಾರರು ಸರ್ಕಾರ ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 15 ದಿನಗಳ ಒಳಗೆ ಅವ್ಯವಸ್ಥೆ ಸರಿ ಮಾಡದಿದ್ದರೆ ಚಾಮರಾಜನಗರ ಬಂದ್ಗೆ ಕರೆ ನೀಡುವುದಾಗಿ ಎಚ್ಚರಿಸಿದರು.</p>.<p>ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,‘ಜೋಡಿರಸ್ತೆಯನ್ನು ಅವೈಜ್ಞಾನಿವಾಗಿ ನಿರ್ಮಾಣ ಮಾಡಿರುವ ಕಾರಣದಿಂದ ಮಳೆ ಬಂದರೆ ಈ ರಸ್ತೆಯು ಮುಳುಗಡೆಯಾಗಿ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತದೆ. ಅಲ್ಲದೆ ಬಾಬುಜಗಜೀವನರಾಂ ಬಡಾವಣೆ, ಸೋಮಣ್ಣ ಲೇಔಟ್ , ರೈಲ್ವೆ ಬಡಾವಣೆ , ಇತರ ಬಡಾವಣೆ ಜಲಾವೃತಗೊಂಡು ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆರೋಪಿಸಿದರು.</p>.<p>ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಮರಿಯಾಲದಹುಂಡಿ ಕುಮಾರ್, ಕೆ.ಎಂ.ನಾಗರಾಜು, ಗು.ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಗುರುಸ್ವಾಮಿ, ಆಕಾಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.</p>.<p>ನಗರದ ಜೋಡಿ ರಸ್ತೆಯ ಜಿಲ್ಲಾಡಳಿತ ಗೇಟಿನ ಮುಂಭಾಗ ಸೇರಿದ ಪ್ರತಿಭಟನಕಾರರು ಸರ್ಕಾರ ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 15 ದಿನಗಳ ಒಳಗೆ ಅವ್ಯವಸ್ಥೆ ಸರಿ ಮಾಡದಿದ್ದರೆ ಚಾಮರಾಜನಗರ ಬಂದ್ಗೆ ಕರೆ ನೀಡುವುದಾಗಿ ಎಚ್ಚರಿಸಿದರು.</p>.<p>ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,‘ಜೋಡಿರಸ್ತೆಯನ್ನು ಅವೈಜ್ಞಾನಿವಾಗಿ ನಿರ್ಮಾಣ ಮಾಡಿರುವ ಕಾರಣದಿಂದ ಮಳೆ ಬಂದರೆ ಈ ರಸ್ತೆಯು ಮುಳುಗಡೆಯಾಗಿ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತದೆ. ಅಲ್ಲದೆ ಬಾಬುಜಗಜೀವನರಾಂ ಬಡಾವಣೆ, ಸೋಮಣ್ಣ ಲೇಔಟ್ , ರೈಲ್ವೆ ಬಡಾವಣೆ , ಇತರ ಬಡಾವಣೆ ಜಲಾವೃತಗೊಂಡು ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆರೋಪಿಸಿದರು.</p>.<p>ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಮರಿಯಾಲದಹುಂಡಿ ಕುಮಾರ್, ಕೆ.ಎಂ.ನಾಗರಾಜು, ಗು.ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಗುರುಸ್ವಾಮಿ, ಆಕಾಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>