<p>ಹನೂರು: ತಾಲ್ಲೂಕಿನ ಎಲ್ಲೆಮಾಳ ಹಾಗೂ ಮಲ್ಲಯ್ಯನಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ಜನರು ಸೋಮವಾರ ಪಟ್ಟಣದ ಅರಣ್ಯ ಇಲಾಖೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಸಮಸ್ಯೆ ಮಿತಿ ಮೀರಿದ್ದು ರೈತರು ಹೈರಾಣಾಗಿದ್ದಾರೆ. ಹಾಕಿದ ಫಸಲೆಲ್ಲಾ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಇದರಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಬಗ್ಗೆ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ತಾಲೂಕಿನ ಕಾಡಂಚಿನ ಜಮೀನುಗಳಿಗೆ ನುಗ್ಗಿ, ನೀರಾವರಿ ಪರಿಕರ ಸೇರಿ ಮುಸುಕಿನ ಜೋಳ ಮತ್ತು ಬಾಳೆ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿ ನಷ್ಟ ಉಂಟುಮಾಡಿವೆ. ಈ ಬಗ್ಗೆ ರೈತರು ಪರಿಹಾರ ಕೇಳಿದರೆ ಅಲ್ಪ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುತ್ತಾರೆ. ಲಕ್ಷಾಂತರ ಬೆಳೆಗೆ ₹5 ಸಾವಿರ, ₹10 ಸಾವಿರ ಪರಿಹಾರ ಕೊಟ್ಟರೆ ರೈತರು ಅಭಿವೃದ್ಧಿಯಾಗುವುದಾದರೂ ಹೇಗೆ’ ಎಂದರು.</p>.<p>‘ಕೂಡಲೇ ಅರಣ್ಯ ಇಲಾಖೆ ಸ್ಥಳೀಯ ಅಧಿಕಾರಿಗಳು ವನ್ಯಪ್ರಾಣಿಗಳ ಹಾವಳಿ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಪ್ರತಿಭಟನೆಯಲ್ಲಿ ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸೋಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕಾರ್ಯದರ್ಶಿ ಪವನ್, ತಾಲೂಕುಅದ್ಯಕ್ಷ ಚಿಕ್ಕರಾಜು,ತಾಲೂಕು ಕಾರ್ಯದರ್ಶಿ ಪ್ರಭು, ಉಪಾದ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನೂರು: ತಾಲ್ಲೂಕಿನ ಎಲ್ಲೆಮಾಳ ಹಾಗೂ ಮಲ್ಲಯ್ಯನಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ಜನರು ಸೋಮವಾರ ಪಟ್ಟಣದ ಅರಣ್ಯ ಇಲಾಖೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಸಮಸ್ಯೆ ಮಿತಿ ಮೀರಿದ್ದು ರೈತರು ಹೈರಾಣಾಗಿದ್ದಾರೆ. ಹಾಕಿದ ಫಸಲೆಲ್ಲಾ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಇದರಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಬಗ್ಗೆ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ತಾಲೂಕಿನ ಕಾಡಂಚಿನ ಜಮೀನುಗಳಿಗೆ ನುಗ್ಗಿ, ನೀರಾವರಿ ಪರಿಕರ ಸೇರಿ ಮುಸುಕಿನ ಜೋಳ ಮತ್ತು ಬಾಳೆ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿ ನಷ್ಟ ಉಂಟುಮಾಡಿವೆ. ಈ ಬಗ್ಗೆ ರೈತರು ಪರಿಹಾರ ಕೇಳಿದರೆ ಅಲ್ಪ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುತ್ತಾರೆ. ಲಕ್ಷಾಂತರ ಬೆಳೆಗೆ ₹5 ಸಾವಿರ, ₹10 ಸಾವಿರ ಪರಿಹಾರ ಕೊಟ್ಟರೆ ರೈತರು ಅಭಿವೃದ್ಧಿಯಾಗುವುದಾದರೂ ಹೇಗೆ’ ಎಂದರು.</p>.<p>‘ಕೂಡಲೇ ಅರಣ್ಯ ಇಲಾಖೆ ಸ್ಥಳೀಯ ಅಧಿಕಾರಿಗಳು ವನ್ಯಪ್ರಾಣಿಗಳ ಹಾವಳಿ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಪ್ರತಿಭಟನೆಯಲ್ಲಿ ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸೋಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕಾರ್ಯದರ್ಶಿ ಪವನ್, ತಾಲೂಕುಅದ್ಯಕ್ಷ ಚಿಕ್ಕರಾಜು,ತಾಲೂಕು ಕಾರ್ಯದರ್ಶಿ ಪ್ರಭು, ಉಪಾದ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>