<p><strong>ಚಾಮರಾಜನಗರ: </strong>ರಾಜ್ಯದಲ್ಲಿ ಕೋವಿಡ್–19 ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಬಾರದು ಎಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಆವರಣದಲ್ಲಿ ಸೇರಿದ ಪ್ರತಿಭಟನನಿರತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.</p>.<p>ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಜಗತ್ತಿನಲ್ಲಿ ಜನರು ಕೋವಿಡ್ನಿಂದಾಗಿ ತತ್ತರಿಸುತ್ತಿದ್ದಾರೆ. ನಮ್ಮ ದೇಶ, ರಾಜ್ಯದಲ್ಲೂ ಸೋಂಕಿನಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಮೂರು ತಿಂಗಳು ಜನರು ಬಹಳ ಜಾಗರೂಕರಾಗಿರಬೇಕು ಎಂದುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಳುತ್ತಿವೆ. ಆದರೆ, ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಸಂಬಂಧ ಸಭೆಗಳನ್ನು ನಡೆಸುತ್ತಿರುವುದು ಖಂಡನೀಯ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಸಂಕಷ್ಟದ ಪರಿಸ್ಥಿತಿಯಲ್ಲೂ ಶುಲ್ಕ ವಸೂಲಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡಲು ಹೊರಟಿರುವುದು ನೋವಿನ ಸಂಗತಿ. ಒಂದು ಕಡೆ ಜನರು ಎಚ್ಚರಿಕೆಯಿಂದ ಇರಿ ಎಂದು ಹೇಳುತ್ತಿರುವ ಸರ್ಕಾರವೇ ಇನ್ನೊಂದು ಕಡೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಎಂದು ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿ ಮಾಡುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜು ಪ್ರಾರಂಭವನ್ನು ರದ್ದು ಮಾಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>ಕೆ.ಪುಟ್ಟಸ್ವಾಮಿಗೌಡ, ನಿಜಧ್ವನಿ ಗೋವೀಂದರಾಜು, ಗು.ಪುರುಷೋತ್ತಮ್, ಚಾ.ರಾ.ಕುಮಾರ್, ವೀರಭದ್ರ, ಸಿದ್ದರಾಜು, ತಾಂಡವಮೂರ್ತಿ, ದೊರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ರಾಜ್ಯದಲ್ಲಿ ಕೋವಿಡ್–19 ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಬಾರದು ಎಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಆವರಣದಲ್ಲಿ ಸೇರಿದ ಪ್ರತಿಭಟನನಿರತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.</p>.<p>ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಜಗತ್ತಿನಲ್ಲಿ ಜನರು ಕೋವಿಡ್ನಿಂದಾಗಿ ತತ್ತರಿಸುತ್ತಿದ್ದಾರೆ. ನಮ್ಮ ದೇಶ, ರಾಜ್ಯದಲ್ಲೂ ಸೋಂಕಿನಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಮೂರು ತಿಂಗಳು ಜನರು ಬಹಳ ಜಾಗರೂಕರಾಗಿರಬೇಕು ಎಂದುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಳುತ್ತಿವೆ. ಆದರೆ, ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಸಂಬಂಧ ಸಭೆಗಳನ್ನು ನಡೆಸುತ್ತಿರುವುದು ಖಂಡನೀಯ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಸಂಕಷ್ಟದ ಪರಿಸ್ಥಿತಿಯಲ್ಲೂ ಶುಲ್ಕ ವಸೂಲಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡಲು ಹೊರಟಿರುವುದು ನೋವಿನ ಸಂಗತಿ. ಒಂದು ಕಡೆ ಜನರು ಎಚ್ಚರಿಕೆಯಿಂದ ಇರಿ ಎಂದು ಹೇಳುತ್ತಿರುವ ಸರ್ಕಾರವೇ ಇನ್ನೊಂದು ಕಡೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಎಂದು ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿ ಮಾಡುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜು ಪ್ರಾರಂಭವನ್ನು ರದ್ದು ಮಾಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>ಕೆ.ಪುಟ್ಟಸ್ವಾಮಿಗೌಡ, ನಿಜಧ್ವನಿ ಗೋವೀಂದರಾಜು, ಗು.ಪುರುಷೋತ್ತಮ್, ಚಾ.ರಾ.ಕುಮಾರ್, ವೀರಭದ್ರ, ಸಿದ್ದರಾಜು, ತಾಂಡವಮೂರ್ತಿ, ದೊರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>