ಇಲ್ಲಿನ ಜಿಲ್ಲಾ ರೈತಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದರು.
‘ರೈತಸಂಘ ರೈತರ ಕಷ್ಟಗಳಲ್ಲದೇ ಸಾರ್ವಜನಿಕರ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸೌಲಭ್ಯವೇ ಇಲ್ಲದಂತಾಗಿದೆ. ಖಾಸಗಿಯಾಗಿ ಟ್ಯಾಂಕರ್ನಲ್ಲಿ ಪಡೆಯುತ್ತಿದ್ದಾರೆ. ಜತೆಗೆ ಬಿಸಿನೀರಿನ ವ್ಯವಸ್ಥೆ ಇಲ್ಲದಂತಾಗಿ ರೋಗಿಗಳು ಹಾಗೂ ಗರ್ಭಿಣಿ, ಬಾಣಂತಿಯರಿಗೆ ತೊಂದರೆಯಾಗಿದೆ. ಮನೆಗಳಿಂದ ಮತ್ತು ಹೋಟೆಲ್ಗಳಲ್ಲಿ ರೋಗಿಗಳು ಬಿಸಿ ನೀರನ್ನು ಆಶ್ರಯಿಸಬೇಕಾಗಿದೆ’ ಎಂದು ದೂರಿದರು.