‘ಜಿಲ್ಲೆಯ ಮಟ್ಟಿಗೆ 30 ಉಪನ್ಯಾಸರನ್ನು ಮೆರಿಟ್ ಆಧಾರದಲ್ಲಿ ನೇಮಿಸಿಕೊಳ್ಳಲು ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆಯಾ ಕಾಲೇಜುಗಳ ಪ್ರಾಂಶುಪಾಲರು ನೇಮಕ ಮಾಡಿಕೊಳ್ಳಲಿದ್ದಾರೆ. ಜುಲೈ 15ರವರೆಗಿನ ಅವಧಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದಾಗಿ ಬೋಧಕರ ಕೊರತೆಯ ಸಮಸ್ಯೆ ನೀಗಲಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.