<p><strong>ಮಹದೇಶ್ವರ ಬೆಟ್ಟ:</strong> ಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಎರಡು ತಿಂಗಳ ಪಡಿತರ ವಿತರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಫಲಾನುಭವಿಗಳು ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಮಹದೇಶ್ವರ ಬೆಟ್ಟ, ಹಳೆಯೂರು, ಕಾಡೊಲ ಸೇರಿದಂತೆ ಇನ್ನಿತರ ಊರುಗಳಲ್ಲಿ ಪಡಿತರ ಸರಿಯಾಗಿ ವಿತರಣೆಯಾಗದಿರುವ ಬಗ್ಗೆ ‘ಪ್ರಜಾವಾಣಿ’ಯ ಶುಕ್ರವಾರ ಸಂಚಿಕೆಯಲ್ಲಿ ‘ಮಹದೇಶ್ವರ ಬೆಟ್ಟ: ಸಿಗುತ್ತಿಲ್ಲ ಉಚಿತ ಪಡಿತರ’ ಶೀರ್ಷಿಕೆಯ ಅಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. </p>.<p>ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿಗಳು ದಿನಪೂರ್ತಿ ತೆರೆಯುವುದರ ಜೊತೆಗೆ ಸರ್ಕಾರ ಘೋಷಿಸಿರುವ ನಿಗದಿತ ಪಡಿತರವನ್ನು ಉಚಿತವಾಗಿ ವಿತರಿಸಲು ಕ್ರಮಕೈಗೊಂಡಿದ್ದಾರೆ. </p>.<p>ಶನಿವಾರ ಬೆಳಿಗ್ಗೆ 7 ಗಂಟೆಗೆ ನ್ಯಾಯಬೆಲೆ ಅಂಗಡಿಗಳು ತೆರೆದಿದ್ದವು. ಗ್ರಾಹಕರು ಸರತಿ ಸಾಲಿನಲ್ಲಿ ನಿಂತುಕೊಂಡು ಪಡಿತರ ಪಡೆದರು. ಕೆಲವು ಕಡೆಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಪಾಲನೆಯಾಗಿದ್ದರೆ, ಇನ್ನೂ ಕೆಲವು ಕಡೆ ಆಗಿಲ್ಲ.</p>.<p class="Subhead">ಆಂಗನವಾಡಿಗಳಿಂದ ಮನೆ ಮನೆಗೆ ವಿತರಣೆ: ಬೆಟ್ಟದ ಸುತ್ತಮುತ್ತ ಅಂಗನವಾಡಿಗಳಿಂದ ಮಕ್ಕಳಿಗೆ ಪೂರೈಸಬೇಕಾದ ಪೌಷ್ಟಿಕ ಆಹಾರ ಮನೆಗೆ ತಲುಪುತ್ತಿರಲಿಲ್ಲ. ಪತ್ರಿಕೆಯ ವರದಿಯು ಈ ವಿಚಾರವನ್ನೂ ಪ್ರಸ್ತಾಪಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಇದಕ್ಕೂ ಸ್ಪಂದಿಸಿರುವ ಅಧಿಕಾರಿಗಳು,ಆಹಾರವನ್ನು ಮಕ್ಕಳ ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ:</strong> ಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಎರಡು ತಿಂಗಳ ಪಡಿತರ ವಿತರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಫಲಾನುಭವಿಗಳು ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಮಹದೇಶ್ವರ ಬೆಟ್ಟ, ಹಳೆಯೂರು, ಕಾಡೊಲ ಸೇರಿದಂತೆ ಇನ್ನಿತರ ಊರುಗಳಲ್ಲಿ ಪಡಿತರ ಸರಿಯಾಗಿ ವಿತರಣೆಯಾಗದಿರುವ ಬಗ್ಗೆ ‘ಪ್ರಜಾವಾಣಿ’ಯ ಶುಕ್ರವಾರ ಸಂಚಿಕೆಯಲ್ಲಿ ‘ಮಹದೇಶ್ವರ ಬೆಟ್ಟ: ಸಿಗುತ್ತಿಲ್ಲ ಉಚಿತ ಪಡಿತರ’ ಶೀರ್ಷಿಕೆಯ ಅಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. </p>.<p>ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿಗಳು ದಿನಪೂರ್ತಿ ತೆರೆಯುವುದರ ಜೊತೆಗೆ ಸರ್ಕಾರ ಘೋಷಿಸಿರುವ ನಿಗದಿತ ಪಡಿತರವನ್ನು ಉಚಿತವಾಗಿ ವಿತರಿಸಲು ಕ್ರಮಕೈಗೊಂಡಿದ್ದಾರೆ. </p>.<p>ಶನಿವಾರ ಬೆಳಿಗ್ಗೆ 7 ಗಂಟೆಗೆ ನ್ಯಾಯಬೆಲೆ ಅಂಗಡಿಗಳು ತೆರೆದಿದ್ದವು. ಗ್ರಾಹಕರು ಸರತಿ ಸಾಲಿನಲ್ಲಿ ನಿಂತುಕೊಂಡು ಪಡಿತರ ಪಡೆದರು. ಕೆಲವು ಕಡೆಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಪಾಲನೆಯಾಗಿದ್ದರೆ, ಇನ್ನೂ ಕೆಲವು ಕಡೆ ಆಗಿಲ್ಲ.</p>.<p class="Subhead">ಆಂಗನವಾಡಿಗಳಿಂದ ಮನೆ ಮನೆಗೆ ವಿತರಣೆ: ಬೆಟ್ಟದ ಸುತ್ತಮುತ್ತ ಅಂಗನವಾಡಿಗಳಿಂದ ಮಕ್ಕಳಿಗೆ ಪೂರೈಸಬೇಕಾದ ಪೌಷ್ಟಿಕ ಆಹಾರ ಮನೆಗೆ ತಲುಪುತ್ತಿರಲಿಲ್ಲ. ಪತ್ರಿಕೆಯ ವರದಿಯು ಈ ವಿಚಾರವನ್ನೂ ಪ್ರಸ್ತಾಪಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಇದಕ್ಕೂ ಸ್ಪಂದಿಸಿರುವ ಅಧಿಕಾರಿಗಳು,ಆಹಾರವನ್ನು ಮಕ್ಕಳ ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>