<p><strong>ಚಾಮರಾಜನಗರ/ಯಳಂದೂರು:</strong> ಯಳಂದೂರು ತಾಲ್ಲೂಕಿನ ಬನ್ನಿಸಾರಿಗೆಯ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಹಾಕಲಾಗಿದೆ ಎಂದು ಆರೋಪಿಸಿ, ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಅಲ್ಲಿನ ಉಪ್ಪಾರರು ಕೈಗೊಂಡ ಬೆನ್ನಲ್ಲೇ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿದರು.</p>.<p>‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ‘ಬನ್ನಿಸಾರಿಗೆ: ಗ್ರಾ.ಪಂ ಸದಸ್ಯ ಸ್ಥಾನಗಳ ಹರಾಜು? ಎಂಬ ವರದಿಯ ಆಧಾರದಲ್ಲಿ ಪ್ರಭಾರ ತಹಶೀಲ್ದಾರ್ ಬಸವರಾಜು ಚಿಗರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್.ರಾಜು ಹಾಗೂ ಇತರ ಅಧಿಕಾರಿಗಳು ಉಪ್ಪಾರ ಮುಖಂಡರಿಂದ ಆರೋಪಗಳ ಬಗ್ಗೆ ಮಾಹಿತಿ ಪಡೆದರು.</p>.<p>ಹರಾಜು ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವ ಕುರಿತು ದಾಖಲೆ ಮತ್ತು ಪೂರಕ ಆಧಾರಗಳನ್ನು ನೀಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂಬ ಭರವಸೆಯನ್ನು ತಹಶೀಲ್ದಾರ್ ಅವರು ಮುಖಂಡರಿಗೆ ನೀಡಿದರು.</p>.<p>‘ಚುನಾವಣೆಗೆ ನೀವೂ ಸ್ಪರ್ಧಿಸಿ. ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಸಲು ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು.<br /><br />‘25 ವರ್ಷಗಳಿಂದ ಉಪ್ಪಾರರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ. ಬಡಾವಣೆಗೆ ಮೂಲ ಸೌಕರ್ಯ ಒದಗಿಸದೆ ನಿರ್ಲಕ್ಷಿಸಲಾಗಿದೆ. ಅಗರ ಗ್ರಾಮಪಂಚಾಯಿತಿಗೆ ಉಪ್ಪಾರ ಬಡಾವಣೆಯನ್ನು ಸೇರಿಸಬೇಕು. ರಸ್ತೆ, ಮನೆ ಮತ್ತಿತರ ಮೂಲಭೂತಸೌಕರ್ಯಗಳನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದಾರೆ' ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದರು.</p>.<p>‘ಗ್ರಾಮದಲ್ಲಿರುವ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಗರ ಪಂಚಾಯಿತಿಗೆ ಉಪ್ಪಾರ ಬಡಾವಣೆ ಸೇರಿಸುವ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗುವುದು. ಹರಾಜು ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆದರೆ ಸದಸ್ಯತ್ವ ವಜಾಗೊಳಿಸಲುಸೂಚಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು' ಎಂದು ಬಸವರಾಜು ಚಿಗರಿ ಅವರು ಹೇಳಿದರು.</p>.<p>ಅಧಿಕಾರಿಗಳು ನೀಡಿದ ಭರವಸೆಯ ನಂತರ ಉಪ್ಪಾರ ಮುಖಂಡರು, ಮತದಾನದಲ್ಲಿ ಭಾಗವಹಿಸುವುದಾಗಿ ಮಾತು ಕೊಟ್ಟರು.</p>.<p>ಉಪ ತಹಶೀಲ್ದಾರ್ ನಂಜಯ್ಯ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.</p>.<p>‘ನಮಗಾಗುತ್ತಿರುವ ಅನ್ಯಾಯಗಳ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದ್ದೇವೆ. ಗ್ರಾಮದಲ್ಲಿರುವ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆಯೂ ವಿವರಿಸಿದ್ದೇವೆ. ಗ್ರಾಮ ಪಂಚಾಯಿತಿ ಸ್ಥಾನ ಹರಾಜು ಹಾಕಿರುವುದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಇರುವ ದಾಖಲೆಯನ್ನೂ ನೀಡಿದ್ದೇವೆ’ ಎಂದುಯಜಮಾನ ಶ್ರೀನಿವಾಸ್ ಅವರು ‘ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ/ಯಳಂದೂರು:</strong> ಯಳಂದೂರು ತಾಲ್ಲೂಕಿನ ಬನ್ನಿಸಾರಿಗೆಯ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಹಾಕಲಾಗಿದೆ ಎಂದು ಆರೋಪಿಸಿ, ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಅಲ್ಲಿನ ಉಪ್ಪಾರರು ಕೈಗೊಂಡ ಬೆನ್ನಲ್ಲೇ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿದರು.</p>.<p>‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ‘ಬನ್ನಿಸಾರಿಗೆ: ಗ್ರಾ.ಪಂ ಸದಸ್ಯ ಸ್ಥಾನಗಳ ಹರಾಜು? ಎಂಬ ವರದಿಯ ಆಧಾರದಲ್ಲಿ ಪ್ರಭಾರ ತಹಶೀಲ್ದಾರ್ ಬಸವರಾಜು ಚಿಗರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್.ರಾಜು ಹಾಗೂ ಇತರ ಅಧಿಕಾರಿಗಳು ಉಪ್ಪಾರ ಮುಖಂಡರಿಂದ ಆರೋಪಗಳ ಬಗ್ಗೆ ಮಾಹಿತಿ ಪಡೆದರು.</p>.<p>ಹರಾಜು ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವ ಕುರಿತು ದಾಖಲೆ ಮತ್ತು ಪೂರಕ ಆಧಾರಗಳನ್ನು ನೀಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂಬ ಭರವಸೆಯನ್ನು ತಹಶೀಲ್ದಾರ್ ಅವರು ಮುಖಂಡರಿಗೆ ನೀಡಿದರು.</p>.<p>‘ಚುನಾವಣೆಗೆ ನೀವೂ ಸ್ಪರ್ಧಿಸಿ. ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಸಲು ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು.<br /><br />‘25 ವರ್ಷಗಳಿಂದ ಉಪ್ಪಾರರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ. ಬಡಾವಣೆಗೆ ಮೂಲ ಸೌಕರ್ಯ ಒದಗಿಸದೆ ನಿರ್ಲಕ್ಷಿಸಲಾಗಿದೆ. ಅಗರ ಗ್ರಾಮಪಂಚಾಯಿತಿಗೆ ಉಪ್ಪಾರ ಬಡಾವಣೆಯನ್ನು ಸೇರಿಸಬೇಕು. ರಸ್ತೆ, ಮನೆ ಮತ್ತಿತರ ಮೂಲಭೂತಸೌಕರ್ಯಗಳನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದಾರೆ' ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದರು.</p>.<p>‘ಗ್ರಾಮದಲ್ಲಿರುವ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಗರ ಪಂಚಾಯಿತಿಗೆ ಉಪ್ಪಾರ ಬಡಾವಣೆ ಸೇರಿಸುವ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗುವುದು. ಹರಾಜು ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆದರೆ ಸದಸ್ಯತ್ವ ವಜಾಗೊಳಿಸಲುಸೂಚಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು' ಎಂದು ಬಸವರಾಜು ಚಿಗರಿ ಅವರು ಹೇಳಿದರು.</p>.<p>ಅಧಿಕಾರಿಗಳು ನೀಡಿದ ಭರವಸೆಯ ನಂತರ ಉಪ್ಪಾರ ಮುಖಂಡರು, ಮತದಾನದಲ್ಲಿ ಭಾಗವಹಿಸುವುದಾಗಿ ಮಾತು ಕೊಟ್ಟರು.</p>.<p>ಉಪ ತಹಶೀಲ್ದಾರ್ ನಂಜಯ್ಯ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.</p>.<p>‘ನಮಗಾಗುತ್ತಿರುವ ಅನ್ಯಾಯಗಳ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದ್ದೇವೆ. ಗ್ರಾಮದಲ್ಲಿರುವ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆಯೂ ವಿವರಿಸಿದ್ದೇವೆ. ಗ್ರಾಮ ಪಂಚಾಯಿತಿ ಸ್ಥಾನ ಹರಾಜು ಹಾಕಿರುವುದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಇರುವ ದಾಖಲೆಯನ್ನೂ ನೀಡಿದ್ದೇವೆ’ ಎಂದುಯಜಮಾನ ಶ್ರೀನಿವಾಸ್ ಅವರು ‘ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>